ಜಿಲ್ಲೆಗಳು

ಕೋಟೆ ಆಯ್ತು, ಈಗ ಸರಗೂರಿನಲ್ಲೂ ಅಪ್ಪಾಜಿ ಕ್ಯಾಂಟೀನ್!

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ

ಮಂಜು ಕೋಟೆ

ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.

ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ  ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.

ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ.
ಕೃಷ್ಣ ನಾಯಕ, ಜಾ.ದಳ ಮುಖಂಡ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

10 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

38 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago