ಜಿಲ್ಲೆಗಳು

ಕೋಟೆ ಆಯ್ತು, ಈಗ ಸರಗೂರಿನಲ್ಲೂ ಅಪ್ಪಾಜಿ ಕ್ಯಾಂಟೀನ್!

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ

ಮಂಜು ಕೋಟೆ

ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.

ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ  ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.

ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ.
ಕೃಷ್ಣ ನಾಯಕ, ಜಾ.ದಳ ಮುಖಂಡ

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

3 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

8 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

8 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

8 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

8 hours ago