ಜಿಲ್ಲೆಗಳು

ಕೋಟೆ ಆಯ್ತು, ಈಗ ಸರಗೂರಿನಲ್ಲೂ ಅಪ್ಪಾಜಿ ಕ್ಯಾಂಟೀನ್!

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ

ಮಂಜು ಕೋಟೆ

ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.

ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ  ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.

ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ.
ಕೃಷ್ಣ ನಾಯಕ, ಜಾ.ದಳ ಮುಖಂಡ

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago