ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ
ಮಂಜು ಕೋಟೆ
ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.
ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.
ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.
–ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
–ಕೃಷ್ಣ ನಾಯಕ, ಜಾ.ದಳ ಮುಖಂಡ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…