ಜಿಲ್ಲೆಗಳು

ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಿ: ಎಎಚ್‌ವಿ

ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ವಿನಿಯೋಗದ ಪವರ್ ಇಟ್ಟುಕೊಂಡರೂ ಸಂಪನ್ಮೂಲ ಕ್ರೋಢೀಕರಣಕ್ಕೆ ನಿಗಾ ಇಡಲು ಬೇರೆಯವರಿಗೆ ವಹಿಸಬೇಕಾಗಿದೆ. ಹಣಕಾಸು ಇಲಾಖೆ ಮೂಲಕ ೧.೨೦ ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಲಿದೆ. ಆದರೆ, ಸಂಪನ್ಮೂಲ ಸಂಗ್ರಹಿಸುವ ಇಲಾಖೆಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಹಣಕಾಸು ಇಲಾಖೆಯ ಪ್ರಗತಿ ಪರಿಶೀಲನೆ ಮಾಡಲು ಸಾಧ್ಯವಾಗದಿರುವುದರಿಂದ ಆದಾಯ ಸೋರಿಕೆಗೆ ಕಾರಣವಾಗಿದೆ. ಮುಖ್ಯಮಂತ್ರಿಯವರ ಅಧೀನದಲ್ಲಿ ಏಳೆಂಟು ಇಲಾಖೆಗಳಿವೆ. ಇವುಗಳನ್ನು ನಿರ್ವಹಿಸಲು ಸಾಧ್ಯವಾಗದೆ ಸತ್ತು ಹೋಗಿವೆ. ಹಾಗಾಗಿ, ಈ ಇಲಾಖೆಗಳಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧೀಜಿ ಉಪ್ಪಿನ ಮೇಲೆ ತೆರಿಗೆ ವಿಧಿಸಬೇಡಿ ಎಂದಿದ್ದರು. ಆದರೆ, ಈಗ ಉಪ್ಪಿಗೂ ಜಿಎಸ್‌ಟಿ ವಿಧಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳ ಮೇಲೆ ಶೇ.೨೮ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ೧೦೦ ಕೋಟಿ ರೂ.ಗೆ ೭೦ ಕೋಟಿ ರೂ. ಜಿಎಸ್‌ಟಿ ಆಗುತ್ತಿರುವ ಕಾರಣ ಕಳ್ಳದಾರಿಯಲ್ಲಿ ಹೋಗುತ್ತಿದೆ. ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ನಿಷೇಧ ಹೇರಿರುವ ಕಾರಣ ಕರ್ನಾಟಕದಲ್ಲಿ ಭಾರೀ ಬೇಡಿಕೆಯಾಗಿದೆ. ಹಾಗಾಗಿ, ಈ ಕಳ್ಳ ದಾರಿಯಲ್ಲಿ ಸಾಗಿಸಲು ಅಧಿಕಾರಿಗಳೇ ದಾರಿ ತೋರಿಸುತ್ತಿದ್ದಾರೆ. ಆದಾಯ ಸಂಗ್ರಹವಾಗುವ ವಾಣಿಜ್ಯ ತೆರಿಗೆ ಇಲಾಖೆಯಲ್ಲೇ ಭ್ರಷ್ಟಾಚಾರ ನಡೆಯುತ್ತಿರುವುದು ಆತಂಕದ ವಿಚಾರವಾಗಿದೆ ಎಂದು ತಿಳಿಸಿದರು.

ಪ್ರಾಥಮಿಕ, ಕಾಲೇಜು ಶಿಕ್ಷಣ ಇಲಾಖೆ ಹರಣ: ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಹರಣ ಮಾಡಲಾಗುತ್ತಿದೆ. ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ತಂದಿದ್ದಾಗ ಇಡೀ ಅಧಿಕಾರಿಗಳು ಒಂದು ಊರಿನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಗ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಕೇಸರಿಮಯ ಮಾಡಲು ಶಾಲಾ ಕೊಠಡಿಗಳಿಗೆ ಬಣ್ಣ ಬಳಿಯಲಾಗುತ್ತಿದೆ. ಪಕ್ಷದ ತತ್ವ, ಸಿದ್ಧಾಂತವನ್ನು ಮಕ್ಕಳ ಮನಸ್ಸಿನ ಮೇಲೆ ಹೇರುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ವಿವೇಕ, ವಿವೇಚನೆ ಮತ್ತು ದೂರದೃಷ್ಟಿತ್ವದಿಂದ ಕೆಲಸ ಮಾಡುವ ಬದಲಿಗೆ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಲಾಗುತ್ತಿದೆ. ವಿವಿಗಳನ್ನು ವಿಭಜನೆ ಮಾಡಿ ಮತ್ತೆ ಒಂಬತ್ತು ವಿವಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಒಬ್ಬರ ಪಿಎಚ್.ಡಿ. ಪದವಿ ಪ್ರಮಾಣ ಪತ್ರ ನಕಲು ಎಂದು ತಿರಸ್ಕರಿಸಿದ್ದರೂ ಕುಲಪತಿಯನ್ನಾಗಿ ನೇಮಿಸಲಾಗಿದೆ. ೫ ಕೋಟಿ ರೂ. ಕೊಟ್ಟವರಿಗೆ ಕುಲಪತಿಯನ್ನಾಗಿ ನೇಮಿಸಲಾಗುತ್ತಿದೆ. ಐದಾರು ಕೋಟಿ ರೂ. ಕೊಟ್ಟು ಕುಲಪತಿಯಾಗಿ ಬರುವವರು ಜನರನ್ನು ತುಂಬಿ ಹಣ ವಸೂಲಿ ಮಾಡುವಂತಾಗಿದೆ. ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಅಧಿಕಾರವನ್ನು ಕುಲಪತಿಗಳಿಂದ ವಾಪಸ್ ಪಡೆದು ಪ್ರತ್ಯೇಕ ಮಂಡಳಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಮುಂಬರುವ ಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುವುದಿಲ್ಲ. ಕೆಲ ಅಪ್ಪ-ಮಕ್ಕಳು ಚುನಾವಣೆ ಕಣಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಅವರಲ್ಲಿ ಶಕ್ತಿ ಇದೆ. ಚುನಾವಣೆಗೆ ನಿಲ್ಲಲು ನಮ್ಮ ಬಳಿ ಹಣವಿಲ್ಲ. ದೇವರಾಜ ಅರಸು ಕಾಲದಿಂದ ಸ್ನೇಹಿತರು, ಅಭಿಮಾನಿಗಳು ಕೊಡುವ ಹಣದಿಂದ ಆಯ್ಕೆಯಾಗಿ ಬರುತ್ತಿದ್ದೆವು. ಈಗ ಐದು, ಆರು ಕೋಟಿ ರೂ. ಹಣ ಎಲ್ಲಿಂದ ತರುವುದು. -ಎ.ಎಚ್.ವಿಶ್ವನಾಥ್

 

ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಅವರು ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago