ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ ಅನ್ನ ಸಂತಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಇದೇ ವೇಳೆ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಮುಜಾಮಿಲ್ ಪಾಷಾ ಮಾತನಾಡಿ ನಾನು ಅಪ್ಪು ಅವರ ಅಪ್ಪಟ ಅಭಿಮಾನಿ ಯಾಗಿದ್ದು, ಅಪ್ಪು ಅವರು ನಮ್ಮನ್ನು ಬಿಟ್ಟು ಎಲ್ಲೂ ಹೋಗಿಲ್ಲ ನಮ್ಮ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತಾರೆ. ಅಪ್ಪುರವರು ಒಬ್ಬ ಜನಸೇವಕ ಜನರ ಕಷ್ಟ ಸುಖಗಳನ್ನು ಅರಿತು ಅದಕ್ಕೆ ಪೂರಕವಾಗಿ ಸಮಾಜದಲ್ಲಿ ತೊಡಗಿದ್ದರು. ಸಮಾಜಕ್ಕೆ ಅಂತಹ ಅನನ್ಯ ಸೇವೆ ನೀಡಿದ ವ್ಯಕ್ತಿಯನ್ನು ಸ್ಮರಣೆ ಮಾಡುವುದು ನಮ್ಮಂತ ಅಭಿಮಾನಿಗಳ ಜವಾಬ್ದಾರಿಯಾಗಿದೆ, ಇವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ಹಾಗೂ ಕೆ ಗುಂಡಾಪುರ ನಿವಾಸಿಗಳು ಹಾಜರಿದ್ದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…