ಜಿಲ್ಲೆಗಳು

ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ

ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ ಅನ್ನ ಸಂತಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಇದೇ ವೇಳೆ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಮುಜಾಮಿಲ್ ಪಾಷಾ ಮಾತನಾಡಿ ನಾನು ಅಪ್ಪು ಅವರ ಅಪ್ಪಟ ಅಭಿಮಾನಿ ಯಾಗಿದ್ದು, ಅಪ್ಪು ಅವರು ನಮ್ಮನ್ನು ಬಿಟ್ಟು ಎಲ್ಲೂ ಹೋಗಿಲ್ಲ ನಮ್ಮ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತಾರೆ. ಅಪ್ಪುರವರು ಒಬ್ಬ ಜನಸೇವಕ ಜನರ ಕಷ್ಟ ಸುಖಗಳನ್ನು ಅರಿತು ಅದಕ್ಕೆ ಪೂರಕವಾಗಿ ಸಮಾಜದಲ್ಲಿ ತೊಡಗಿದ್ದರು. ಸಮಾಜಕ್ಕೆ ಅಂತಹ ಅನನ್ಯ ಸೇವೆ ನೀಡಿದ ವ್ಯಕ್ತಿಯನ್ನು ಸ್ಮರಣೆ ಮಾಡುವುದು ನಮ್ಮಂತ ಅಭಿಮಾನಿಗಳ ಜವಾಬ್ದಾರಿಯಾಗಿದೆ, ಇವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ಹಾಗೂ ಕೆ ಗುಂಡಾಪುರ ನಿವಾಸಿಗಳು ಹಾಜರಿದ್ದರು.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

8 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

10 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

11 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

11 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

11 hours ago