ಜಿಲ್ಲೆಗಳು

ನಾಳೆ ಅಪ್ಪು ನಮನ ಕಾರ್ಯಕ್ರಮ, ಬರಲಿದ್ದಾರೆ ಶಿವರಾಜ್ ಕುಮಾರ್

ಯುವದಸರೆಗೆ ಕ್ಷಣಗಣನೆ, ಪೋಸ್ಟರ್ ಬಿಡುಗಡೆ, ಸಮಾರಂಭಕ್ಕೆ ಪಾಸ್ ಬೇಕಿಲ್ಲ

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಸೆ.28ಕ್ಕೆ “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು.
ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ಸೆ. 28ರಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.

ಸೆ.29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಪವನ್ ಡ್ಯಾನ್ಸರ್ ಹಾಗೂ ಇತರರಿಂದ ನೃತ್ಯ ರೂಪಕ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ. ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ.

ಅ.1ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕ ಸೋನು ನಿಗಮ್, ಗಾಯಕಿ ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ ಇರಲಿದೆ.
ಅ.2ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್, ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ, ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಅ.3ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಉಪ ಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಇದೇ ವೇಳೆ ತಿಳಿಸಿದರು.

ಭಿತ್ತಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಸಮಿತಿಯ ಕಾರ್ಯಾಧ್ಯಕ್ಷ ವೆಂಕಟರಾಜು ಎನ್ ಸಿ, ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಎಂ.ಬದರೀಶ್, ಸಂತೋಷ್ ಕುಮಾರ್, ಎಂ.ಮಹೇಂದ್ರ, ಕಾರ್ಯದರ್ಶಿ ಆಶಾದ್ ರೆಹಮಾನ್ ಷರೀಫ್, ಡಾ.ನಿಂಗರಾಜು ಆರ್ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

31 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

44 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

2 hours ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago