ಜಿಲ್ಲೆಗಳು

ನಾಳೆ ಅಪ್ಪು ನಮನ ಕಾರ್ಯಕ್ರಮ, ಬರಲಿದ್ದಾರೆ ಶಿವರಾಜ್ ಕುಮಾರ್

ಯುವದಸರೆಗೆ ಕ್ಷಣಗಣನೆ, ಪೋಸ್ಟರ್ ಬಿಡುಗಡೆ, ಸಮಾರಂಭಕ್ಕೆ ಪಾಸ್ ಬೇಕಿಲ್ಲ

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಸೆ.28ಕ್ಕೆ “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು.
ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ಸೆ. 28ರಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.

ಸೆ.29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಪವನ್ ಡ್ಯಾನ್ಸರ್ ಹಾಗೂ ಇತರರಿಂದ ನೃತ್ಯ ರೂಪಕ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ. ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ.

ಅ.1ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕ ಸೋನು ನಿಗಮ್, ಗಾಯಕಿ ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ ಇರಲಿದೆ.
ಅ.2ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್, ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ, ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಅ.3ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಉಪ ಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಇದೇ ವೇಳೆ ತಿಳಿಸಿದರು.

ಭಿತ್ತಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಸಮಿತಿಯ ಕಾರ್ಯಾಧ್ಯಕ್ಷ ವೆಂಕಟರಾಜು ಎನ್ ಸಿ, ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಎಂ.ಬದರೀಶ್, ಸಂತೋಷ್ ಕುಮಾರ್, ಎಂ.ಮಹೇಂದ್ರ, ಕಾರ್ಯದರ್ಶಿ ಆಶಾದ್ ರೆಹಮಾನ್ ಷರೀಫ್, ಡಾ.ನಿಂಗರಾಜು ಆರ್ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

4 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

5 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago