ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 200 ಅರಬ್ಬಿ ಶಾಲೆಗಳಿದ್ದು, ಈ ಪೈಕಿ 108 ಅನುದಾನಿತ ಶಾಲೆಗಳು ಮತ್ತು 80ಕ್ಕೂ ಅಧಿಕ ಅನುದಾನ ರಹಿತ ಶಾಲೆಗಳಿವೆ. ಶಿಕ್ಷಣ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಈ ಎಲ್ಲಾ ಶಾಲೆಗಳು ರಾಜ್ಯ ಶಿಕ್ಷಣ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ ಎಂದರು.
ಬಹುತೇಕ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸುತ್ತಿಲ್ಲ, ವಿಜ್ಞಾನದಂತಹ ಪ್ರಮುಖ ವಿಷಯಗಳನ್ನೇ ಬೋಧಿಸುತ್ತಿಲ್ಲ. ಇದರಿಂದಾಗಿ ಅರಬ್ಬಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿದೆ ಎಂಬ ದೂರುಗಳೂ ಕೇಳಿ ಬಂದಿದೆ.
ರಾಜ್ಯದಲ್ಲಿನ ಅರಬ್ಬಿ ಶಾಲೆಗಳ ಸಮೀಕ್ಷೆ ಮಾಡಲಾಗುತ್ತಿದೆ, ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶಿಕ್ಷಣ ಇಲಾಖೆಯ ನಿಯಮ ಪಾಲಿಸದ ಸೂಕ್ತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…