ಜಿಲ್ಲೆಗಳು

ಸಾಧಕರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತಾಗಬೇಕು: ಕೋಟೆ ಎಂ.ಶಿವಣ್ಣ

ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ

ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ  ಅಧ್ಯಕ್ಷ ಕೋಟೆ ಎಂ.ಶಿವಣ್ಣ ಆಶಿಸಿದರು.
ಕನ್ನಡ ಜಾನಪದ ಪರಿಷತ್ ಮೈಸೂರು ಜಿಲ್ಲಾ ಘಟಕದ ೬ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ನಗರದ ರೋಟರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಜಾನಪದ ದಿನಾಚರಣೆ ಹಾಗೂ ವಿಶ್ವ ಬುಡಕಟ್ಟು ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನವೆಂಬರ್ ೧ರಂದು ಅನೇಕರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರಕುತ್ತದೆ. ರಾಜ್ಯೋತ್ಸವ ಸಂದರ್ಭದಲ್ಲಿ ಸರ್ಕಾರ ಅರ್ಜಿ ಕರೆದು ಪ್ರಶಸ್ತಿ ನೀಡುವ ಪರಿಪಾಠ ಹೋಗಬೇಕು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಗಳಂತೆ ಸಾಧನೆ ಮಾಡುತ್ತಿರುವ ಅರ್ಹರಿಗೆ ಇದರಿಂದ ಪ್ರಶಸ್ತಿ ಕೈತಪ್ಪಿ, ಅರ್ಜಿ ಹಾಕಿಕೊಂಡು, ರಾಜಕಾರಣಿಗಳ ಶಿಫಾರಸು ಮಾಡಿಸಿಕೊಂಡವರಿಗೆ ಬಹುತೇಕ ರಾಜ್ಯೋತ್ಸವ ಪ್ರಶಸ್ತಿ ದೊರಕುವ ಪರಿಸ್ಥಿತಿ ನಿರ್ಮಾಣವಾಗಿದೆ, ಈ ಪರಿಪಾಠ ಹೋಗಬೇಕಾದರೆ. ಸರ್ಕಾರವೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ನಿಟ್ಟಿನಲ್ಲಿ ದುಡಿಯುತ್ತಿರುವ ಸಾಧಕರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಹೋಗಿ ಪ್ರಶಸ್ತಿ ನೀಡುವಂತಾಗಬೇಕು. ಸಾಧಕರನ್ನು ಸರ್ಕಾರವೇ ಗುರುತಿಸಿ ಗೌರವಿಸಿದಾಗ ಆ ಪ್ರಶಸ್ತಿಗೆ ಬೆಲೆ ಕಟ್ಟಲಾಗದು. ಆದರೆ, ಸಾಧಕರಿಗೆ ಪ್ರಶಸ್ತಿ ನೀಡಲು ಅರ್ಜಿ ಕರೆಯುವುದು ಕೆಟ್ಟ ಸಂಪ್ರದಾಯಎಂದರು.

ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ಸಾಧಕರಾದ ಬಸವಣ್ಣ (ವೀರಗಾಸೆ), ಮಾದಮ್ಮ (ಸೋಬಾನೆ ಪದ), ಮಹದೇವಯ್ಯ (ಕಂಸಾಳೆ), ನಿಖಿಲ್ (ಡೊಳ್ಳು ಕುಣಿತ). ಬುಡಕಟ್ಟು ಕ್ಷೇತ್ರದ ಸಾಧಕರಾದ ಚೋಮಮ್ಮ, ಜೆ.ಡಿ.ಜಯಪ್ಪ, ತೋಲಯ್ಯ ಹಾಗೂ ಹರ್ಷ ಅವರುಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜತೆಗೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಕೆ.ಆರ್. ನಗರ ಪುರಸಭಾಧ್ಯಕ್ಷ ಪ್ರಕಾಶ್, ಪ್ರೊ.ನಾಗಣ್ಣ, ಬಸವರಾಜು, ಸೋಮಶೇಖರ್,ಟಿ.ಎನ್.ಪುಟ್ಟರಾಜು, ಡಾ.ಪದ್ಮರಾಜ್ ಹಾಗೂ ಮರಿಯಯ್ಯ ಅವರುಗಳನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ,ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ಕಾವೇರಿ ಪ್ರಕಾಶ್, ಪ್ರಾಧ್ಯಾಪಕಿ ಎ.ಮಂಜುಳಾ, ಗಾಯಕ ಲಕ್ಷ್ಮೀರಾಮ್, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಸಿದ್ಧಪ್ಪ, ಬೆಟ್ಟೇಗೌಡ, ಬೋರೇಗೌಡ, ಮರಿದೇವಯ್ಯ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

12 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

15 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

18 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

21 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

21 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

21 hours ago