ಜಿಲ್ಲೆಗಳು

7 ಮಂದಿ ಕೊಲೆ ಆರೋಪಿಗಳ ಬಂಧನ

ದೊಡ್ಡರಸಿನಕೆರೆ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ

ಭಾರತೀನಗರ: ಇಲ್ಲಿಗೆ ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಅಲಿಯಾಸ್ ಕಪ್ಪೆ(೨೨) ಹತ್ಯೆ ಪ್ರಕರಣದ ೭ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೊಡ್ಡರಸಿನಕೆರೆ ಗ್ರಾಮದ ದೊಡ್ಡಯ್ಯ, ದೇವರಾಜು, ಅಭಿ ಅಲಿಯಾಸ್ ಗಾಂಜಾ, ಪುಟ್ಟಸ್ವಾಮಿ ಅಲಿಯಾಸ್ ಬೆಲ್ಲ, ಅರವಿಂದ್, ಚಂದು ಅಲಿಯಾಸ್ ಚಂದ್ರು, ರಾಘವೇಂದ್ರ ಎಂಬವರು ಅರುಣ್‌ನನ್ನು ಹತ್ಯೆಗೈದು ತಲೆ ಮರೆಸಿಕೊಂಡಿದ್ದ

೭ ಮಂದಿ ಆರೋಪಿಗಳನ್ನು ೩ ದಿನಗಳ ಹಿಂದೆ ಕೆ.ಎಂ.ದೊಡ್ಡಿ ಪೊಲೀಸರು ಬಂಧಿಸಿದ್ದರು.

ಬಂಧಿಸಿದ ನಂತರ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮದ್ದೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು.

ರೌಡಿ ಶೀಟರ್ ಅರುಣನ ಅತ್ಯೆ ನಡೆದಿದ್ದ ಸ್ಥಳ ಹಾಗೂ ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳ ಸಮ್ಮುಖದಲ್ಲಿ ಮಹಜರು ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಕೋಪಕ್ಕೆ ತಿರುಗಿದ ಜಗಳ: ಹಳೆದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಎಂಬವರ ನಡುವೆ ಕಳೆದ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖದಲ್ಲಿ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ನಂತರ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್‌ನಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿದ ೭ ಮಂದಿಯೂ ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದ್ದರು.

ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಈತನನ್ನು ಭಾರತೀಗರದ ಜಿ. ವಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

andolana

Recent Posts

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

3 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

3 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

3 hours ago

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…

3 hours ago

ಸಂಶೋಧನೆಗೆ ಸಿಗದ ಪ್ರಾಮುಖ್ಯತೆ : ವಿಶ್ರಾಂತ ಕುಲಪತಿ ರಂಗಪ್ಪ ಬೇಸರ

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…

4 hours ago

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…

4 hours ago