ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ ರಾಜಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ ಅಲ್ಲಿಗೆ ತೆರಳಿದ್ದ ತನಿಖಾ ತಂಡ ಶೋಧ ನಡೆಸಿ, ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಹಿನ್ನೆಲೆ: ವಿವೇಕಾನಂದ ನಗರ ಸರ್ಕಲ್ ಬಳಿ ಮಾರುತಿ ಜ್ಯುವಲರ್ಸ್ ಚಿನ್ನಾಭರಣ ಅಂಗಡಿ ತೆರೆದು ಸಾರ್ವಜನಿಕರಿಂದ ಚಿನ್ನಾಭರಣಗಳನ್ನು ಗಿರವಿ ಇಟ್ಟು ಕೊಂಡು ಸಾಲ ಸೌಲಭ್ಯ ನೀಡುತ್ತಿದ್ದ. ಲಕ್ಕಿ ಡಿಪ್ ನಡೆಸುವ ಮೂಲಕ ಸಾರ್ವಜನಿಕರಿಂದ ಕೋಟ್ಯಾಂತರ ರೂ. ಹಣ ಸಂಗ್ರಹಿಸಿದ್ದ. ಒಂದುವರೆ ತಿಂಗಳ ಹಿಂದೆ ಕುಟುಂಬ ಸಮೇತ ಪರಾರಿಯಾಗಿದ್ದ. ಈ ಸಂಬಂಧ ಗ್ರಾಹಕರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದರು.
ರಾಜಸ್ಥಾನದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಕುವೆಂಪು ನಗರ ಠಾಣೆ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…