ಜಿಲ್ಲೆಗಳು

ಗಿರವಿ ಇಟ್ಟ ಆಭರಣದ ಜತೆ ಪರಾರಿಯಾಗಿದ್ದ ಜ್ಯುವೆಲ್ಲರ್ಸ್ ಮಾಲೀಕನ ಬಂಧನ

ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.

ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ ರಾಜಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ ಅಲ್ಲಿಗೆ ತೆರಳಿದ್ದ ತನಿಖಾ ತಂಡ ಶೋಧ ನಡೆಸಿ, ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಹಿನ್ನೆಲೆ: ವಿವೇಕಾನಂದ ನಗರ ಸರ್ಕಲ್ ಬಳಿ ಮಾರುತಿ ಜ್ಯುವಲರ್ಸ್ ಚಿನ್ನಾಭರಣ ಅಂಗಡಿ ತೆರೆದು ಸಾರ್ವಜನಿಕರಿಂದ ಚಿನ್ನಾಭರಣಗಳನ್ನು ಗಿರವಿ ಇಟ್ಟು ಕೊಂಡು ಸಾಲ ಸೌಲಭ್ಯ ನೀಡುತ್ತಿದ್ದ. ಲಕ್ಕಿ ಡಿಪ್ ನಡೆಸುವ ಮೂಲಕ ಸಾರ್ವಜನಿಕರಿಂದ ಕೋಟ್ಯಾಂತರ ರೂ. ಹಣ ಸಂಗ್ರಹಿಸಿದ್ದ. ಒಂದುವರೆ ತಿಂಗಳ ಹಿಂದೆ ಕುಟುಂಬ ಸಮೇತ ಪರಾರಿಯಾಗಿದ್ದ. ಈ ಸಂಬಂಧ ಗ್ರಾಹಕರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದರು.
ರಾಜಸ್ಥಾನದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಕುವೆಂಪು ನಗರ ಠಾಣೆ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 mins ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

28 mins ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

45 mins ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

50 mins ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

1 hour ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

1 hour ago