ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ ರಾಜಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ ಅಲ್ಲಿಗೆ ತೆರಳಿದ್ದ ತನಿಖಾ ತಂಡ ಶೋಧ ನಡೆಸಿ, ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಹಿನ್ನೆಲೆ: ವಿವೇಕಾನಂದ ನಗರ ಸರ್ಕಲ್ ಬಳಿ ಮಾರುತಿ ಜ್ಯುವಲರ್ಸ್ ಚಿನ್ನಾಭರಣ ಅಂಗಡಿ ತೆರೆದು ಸಾರ್ವಜನಿಕರಿಂದ ಚಿನ್ನಾಭರಣಗಳನ್ನು ಗಿರವಿ ಇಟ್ಟು ಕೊಂಡು ಸಾಲ ಸೌಲಭ್ಯ ನೀಡುತ್ತಿದ್ದ. ಲಕ್ಕಿ ಡಿಪ್ ನಡೆಸುವ ಮೂಲಕ ಸಾರ್ವಜನಿಕರಿಂದ ಕೋಟ್ಯಾಂತರ ರೂ. ಹಣ ಸಂಗ್ರಹಿಸಿದ್ದ. ಒಂದುವರೆ ತಿಂಗಳ ಹಿಂದೆ ಕುಟುಂಬ ಸಮೇತ ಪರಾರಿಯಾಗಿದ್ದ. ಈ ಸಂಬಂಧ ಗ್ರಾಹಕರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದರು.
ರಾಜಸ್ಥಾನದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಕುವೆಂಪು ನಗರ ಠಾಣೆ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…