ಜಿಲ್ಲೆಗಳು

ಮೂವರು ಸರಗಳ್ಳರ ಬಂಧನ: 13 ಲಕ್ಷ ರೂ.ವಶ

ಮೈಸೂರು: ಮೂವರು ಸರಗಳ್ಳರನ್ನು ಬಂಧಿಸಿರುವ ಸರಸ್ವತಿಪುರಂ ಪೊಲೀಸರು 13 ಲಕ್ಷ ರೂ. ಮೌಲ್ಯದ 220 ಗ್ರಾಂ ಚಿನ್ನದ ಆಭರಣಗಳನ್ನು ಮತ್ತು ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೋತ್ರಿ ಬಡಾವಣೆಯ ಮಹಿಳೆಯೊಬ್ಬರು ಜ.23ರಂದು ಮಾರುತಿ ಟೆಂಪಲ್ ಬಳಿಯಿರುವ ಲಾಯಲ್‌ವರ್ಲ್ಡ್‌ನಲ್ಲಿ ಸಾಮಾಗ್ರಿಗಳನ್ನು ಖರೀದಿ  ಮಾಡಿಕೊಂಡು ಹೋಗುತ್ತಿರುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಖದೀಮರು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ ಸರಸ್ವತಿಪುರಂ ಪೊಲೀಸರು ಫೆ.2ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7 ಸರಗಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ರೂ 13 ಲಕ್ಷ ರೂ. ಬೆಲೆ ಬಾಳುವ 220 ಗ್ರಾಂ ತೂಕದ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಚರಣೆಯಿಂದ ಸರಸ್ವತಿಪುರಂ ಪೊಲೀಸ್ ಠಾಣೆಯ 3, ವಿಜಯನಗರ ಪೊಲೀಸ್ ಠಾಣೆಯ ೨, ವಿದ್ಯಾರಣ್ಯಪುರಂ ಠಾಣೆಯ, ಹೆಬ್ಬಾಳ್ ಠಾಣೆಯಲ್ಲಿ ತಲಾ 1 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಡಿಸಿಪಿ ಎಸ್.ಜಾಹ್ನವಿ ಮತ್ತು ಎಸಿಪಿ ಎಸ್.ಇ.ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಪಿಐ
ಗೋವಿಂದರಾಜು, ಪಿಎಸ್‌ಐ ರಮೇಶ್, ಎಎಸ್‌ಐ ಚೌಡಪ್ಪ ಹಾಗೂ ಸಿಬ್ಬಂದಿ ಮೋಹನ್‌ಕುಮಾರ್,
ರಾಘವೇಂದ್ರ, ಉಮೇಶ್, ಹರೀಶ್‌ಕುಮಾರ್, ಕುಮಾರ್, ಮಂಜುನಾಥ್ ಮತ್ತು ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ

ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…

26 mins ago

ನಾಳೆಯಿಂದ ಸುತ್ತೂರು ಜಾತ್ರಾ ಮಹೋತ್ಸವ: ಮಹಾದಾಸೋಹಕ್ಕೆ ಅಧಿಕೃತ ಚಾಲನೆ

ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು…

38 mins ago

ಓದುಗರ ಪತ್ರ: ಪ್ರಾಮಾಣಿಕತೆ ಮೆರೆದ ಕುಟುಂಬ

ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ…

4 hours ago

ಓದುಗರ ಪತ್ರ: ಬೆಳೆ ನಷ್ಟಕ್ಕೆ ಪರಿಹಾರ ನೀಡಿ

ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು,…

4 hours ago

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 10ನೇ ವಯಸ್ಸಿನಲ್ಲೇ ಹೆಡ್ ಮಾಸ್ಟರಾಗಿ ವಿಶ್ವ ದಾಖಲೆ ಬರೆದ ಬಾಬರ್ ಅಲಿ !

ಪಂಜುಗಂಗೊಳ್ಳಿ  ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು…

5 hours ago