ಮೈಸೂರು : ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.
ಇದೇ ವೇಳೆ ರಾಮ ಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಮ್ ಲಲ್ಲಾ ವಿಗ್ರಹವನ್ನು ಗರ್ಭಗುಡಿಯೊಳಗೆ ಪ್ರತಿಷ್ಠಾಪಿಸಲಾಗಿದೆ.
ಕಾರ್ಯಕ್ರಮಕ್ಕೂ ಮುನ್ನ ಮೈಸೂರಿನ ವಿದ್ಯಾರಣ್ಯಪುರಂನ ಪ್ರಸಿದ್ಧ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಮಳಿಗೆಯವರು, ಅರುಣ್ ಯೋಗಿರಾಜ್ ಮತ್ತು ಅವರ ಕುಟುಂಬಕ್ಕೆ ವಿವಿಧ ಸಿಹಿ ತಿನಿಸುಗಳಿಂದ ತಯಾರಿಸಿದ ರಾಮಮಂದಿರದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.
ಸುಮಾರು ೮ ರೀತಿಯ ಸಿಹಿತಿಂಡಿ ಬಳಕೆ: ಅಂಜೂರ, ಬಾದಾಮಿ, ಖಜೂ, ಡ್ರೈ ಫ್ರೂಟ್ಸ್ ಬಳಸಿ ಸುಮಾರು ೮ರಿಂದ ೧೦ದಿನದಲ್ಲಿ ರಾಮ ಮಂದಿರ ಪ್ರತಿಕೃತಿಯನ್ನು ನಿರ್ಮಾಣ ಮಾಡಲಾಗಿದೆ. ಇದನ್ನು ತಯಾರಿಸು ೧೫ ಮಂದಿ ಶ್ರಮಿಸಿದ್ದಾರೆ.
ಈ ಸಿಹಿ ರಾಮ ಮಂದಿರವನ್ನು ಶಿಲ್ಪಿ ಅರುಣ್ ಯೋಗಿರಾಜ್ ಹಾಗೂ ಕುಟುಂಬದವರಿಗೆ ಅರ್ಪಿಸಲಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…