ಜಿಲ್ಲೆಗಳು

ಬಿ.ಆರ್.ಹಿಲ್ಸ್ ಹೆದ್ದಾರಿಯಲ್ಲಿ ಕಿತ್ತು ಹೋದ ಡಾಂಬರು

ಜಲ್ಲಿಯಿಂದ ಮುಚ್ಚಿದರೂ ಮತ್ತೆ ಹಳ್ಳ ನಿರ್ವಾಣ; ಸಂಚಾರ ದುಸ್ತರ

ವರದಿ: ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದಿಂದ ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೦)ಯಲ್ಲಿ ಅಲ್ಲಲ್ಲಿ ಡಾಂಬರು ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಕಳೆದ ಮೂರು ತಿಂಗಳಿಂದ ಸುರಿದ ಸತತ ಮಳೆಗೆ ಡಾಂಬರು ಕಿತ್ತು ಬಂದಿದೆ. ಇತ್ತೀಚೆಗೆ ಎಂ.ಸ್ಯಾಂಡ್ ಮತ್ತು ಜಲ್ಲಿ ಮಿಶ್ರಣ ಮಾಡಿ ಹಾಕಿ ಗುಂಡಿಗಳಿಗೆ ತೇಪೆ ಹಾಕಿದ್ದರೂ ಪ್ರೋಂಜನವಾಗಿಲ್ಲ. ವಾಹನಗಳ ಓಡಾಟದಿಂದ ಜಲ್ಲಿ ಚದುರಿ ಹೋಗಿ ಮತ್ತಷ್ಟು ತೊಂದರೆಯಾಗಿದೆ.

ನಗರದ ರಾಮಸಮುದ್ರದ ಬಡಾವಣೆಯ ಮುಂಭಾಗದ ತಿರುವಿನಲ್ಲಿ ರಸ್ತೆ ಪದೇ ಪದೇ ಕಿತ್ತು ಹೋಗುತ್ತಿದೆ. ಗುಣಮಟ್ಟದ ಡಾಂಬರು ಹಾಕಿ ಸರಿಪಡಿಸುವ ಕೆಲಸವನ್ನು ಸಂಬಂಧಪಟ್ಟವರು ಮಾಡದೆ ಇರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಾಗವಳ್ಳಿಯಲ್ಲಿ ೩ ಕಡೆ ಪೈಪ್‌ಲೈನ್ ಹಾಕಲು ಹೆದ್ದಾರಿಯನ್ನು ೬ ತಿಂಗಳ ಹಿಂದೆಯೇ ಅಗೆದು ಹಳ್ಳ ಮಾಡಲಾಗಿದೆ. ಇನ್ನೂ ಸರಿಯಾಗಿ ಡಾಂಬರು ಹಾಕಿ ಮುಚ್ಚದೆ ಹಾಗೆಯೇ ಬಿಡಲಾಗಿದೆ.

ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿಯ ಹೊಂಡರಬಾಳು ಗ್ರಾಮದ ಬಳಿಯಿಂದ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದೊಳಗೆ ೨೫ ಕಿ.ಮೀ.ಸಾಗಲಿದ್ದು, ಐತಿಹಾಸಿಕ ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸಲಿದೆ.

ಅರಣ್ಯದೊಳಗೆ ಕಿರಿದಾದ ಹೆದ್ದಾರಿಯು ೭-೮ ಕಡೆ ಕಿತ್ತು ಹೋಗಿದೆ. ತಾತ್ಕಾಲಿಕವಾಗಿ ಜಲ್ಲಿ ಮತ್ತು ಎಂ.ಸ್ಯಾಂಡ್ ಬಳಿಸಿ ಮುಚ್ಚಿದರೂ ಮತ್ತೆ ಹಳ್ಳವಾಗಿದೆ. ಜಲ್ಲಿ ಚದುರಿ ಹೋಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಕೆಲವು ಕಡೆ ರಸ್ತೆಯ ಬದಿ ಕೊಚ್ಚಿ ಹೋಗಿ ಮಂಡಿುುಂದ್ದದ ಹಳ್ಳ ಬಿದ್ದಿದೆ. ಬೈಕ್‌ನಲ್ಲಂತೂ ಓಡಾಡಲು ಸರ್ಕಸ್ ವಾಡಬೇಕಿದೆ.

 ವೀಕೆಂಡ್‌ನಲ್ಲಿ ಹೆಚ್ಚು ವಾಹನ ಓಡಾಟ
ಹೆದ್ದಾರಿಯಲ್ಲಿ ಪ್ರತಿನಿತ್ಯ ಕೆಎಸ್‌ಆರ್‌ಟಿಸಿ ಬಸ್ ಚಾಮರಾಜನಗರದಿಂದ – ಬಿಳಿಗಿರಿರಂಗನಬೆಟ್ಟಕ್ಕೆ ಸಂಚರಿಸುತ್ತದೆ. ಪ್ರತಿ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೇವಾಲಯಕ್ಕೆ ಹೋಗಿ ಬರುತ್ತಾರೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಕೆ.ಗುಡಿಯಲ್ಲಿರುವ ಜಂಗಲ್ ರೆಸಾರ್ಟ್‌ಗೆ ತೆರಳುತ್ತಾರೆ. ವಾಸ್ತವ್ಯ ಹೂಡಿ
ಸಫಾರಿ ಹೋಗಿ ಅರಣ್ಯದ ಸೊಬಗು ಸವಿದು ಖುಷಿ ಪಡುತ್ತಾರೆ. ಇನ್ನು ಕೆ.ಗುಡಿ ವಲಯಾರಣ್ಯ ಕಚೇರಿಯ ನಲ್ಲೂರು ಸಮೀಪವಿದ್ದು, ಪ್ರತಿನಿತ್ಯ ಅರಣ್ಯಾಧಿಕಾರಿಗಳ ಜೀಪು, ಸಫಾರಿ ವಾಹನಗಳು ಓಡಾಡುತ್ತವೆ. ಆದರೆ, ಅರಣ್ಯದೊಳಗಿನ ಕಿರಿದಾದ ಹೆದ್ದಾರಿ ಕಿತ್ತು ಹೋಗಿದ್ದರಿಂದ ಚಾಲಕರು ಪ್ರಯಾಸ ಪಡಬೇಕಿದೆ.

 ಹಿತಕರ ವನಸಿರಿ; ಸಂಚಾರ ಕಿರಿಕಿರಿ
ಹೊಂಡರಬಾಳು ಬಳಿಯ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಿಂದ ಹೊರಟರೆ ಗಗನ ಚುಂಬಿ ಮರಗಳು, ಹಸಿರು ನೆಲ, ಅಲ್ಲಲ್ಲಿ ಜಿಂಕೆಗಳ ಪ್ರತ್ಯಕ್ಷ, ಪಕ್ಷಿಗಳ ಕಲರವ, ಜನರು-ವಾಹನಗಳ ಸದ್ದುಗದ್ದಲವಿಲ್ಲದ ತಂಪಾದ ಹಿತಕರ ವಾತಾವರಣ ಕಣ್ಮನ ಸೆಳೆಯುತ್ತದೆ. ಪ್ರಕೃತಿಯು ಸಿರಿ ಮನಸ್ಸಿಗೆ ಹಿತ ನೀಡಿದರೂ ಹೆದ್ದಾರಿ ಮಾತ್ರ ಸಂಚಾರಕ್ಕೆ ಕಿರಿಕಿರಿ ಮಾಡುತ್ತದೆ.

 ಮಳೆಯಿಂದ ಹುಲಿ ಸಂರಕ್ಷಿತಾರಣ್ಯದೊಳಗೆ ಕಿತ್ತುಹೋದ ಹೆದ್ದಾರಿಯನ್ನು ದುರಸ್ತಿ ಮಾಡಿಸಿಕೊಡಿ ಎಂದು ಅರಣ್ಯ ಇಲಾಖೆಯ ವತಿಯಿಂದ ಲೋಕೋಪಯೋಗಿ ಇಲಾಖೆ ಈಗಾಗಲೇ ಮನವಿ ಮಾಡಲಾಗಿದೆ. -ವಿನೋದ್‌ಗೌಡ, ಕೆ.ಗುಡಿ ವಲಯ ಅರಣ್ಯಾಧಿಕಾರಿ.

andolana

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

30 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

34 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

59 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

1 hour ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago