ಜಿಲ್ಲೆಗಳು

ಬಿ.ಆರ್.ಹಿಲ್ಸ್ ಹೆದ್ದಾರಿಯಲ್ಲಿ ಕಿತ್ತು ಹೋದ ಡಾಂಬರು

ಜಲ್ಲಿಯಿಂದ ಮುಚ್ಚಿದರೂ ಮತ್ತೆ ಹಳ್ಳ ನಿರ್ವಾಣ; ಸಂಚಾರ ದುಸ್ತರ

ವರದಿ: ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದಿಂದ ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೦)ಯಲ್ಲಿ ಅಲ್ಲಲ್ಲಿ ಡಾಂಬರು ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಕಳೆದ ಮೂರು ತಿಂಗಳಿಂದ ಸುರಿದ ಸತತ ಮಳೆಗೆ ಡಾಂಬರು ಕಿತ್ತು ಬಂದಿದೆ. ಇತ್ತೀಚೆಗೆ ಎಂ.ಸ್ಯಾಂಡ್ ಮತ್ತು ಜಲ್ಲಿ ಮಿಶ್ರಣ ಮಾಡಿ ಹಾಕಿ ಗುಂಡಿಗಳಿಗೆ ತೇಪೆ ಹಾಕಿದ್ದರೂ ಪ್ರೋಂಜನವಾಗಿಲ್ಲ. ವಾಹನಗಳ ಓಡಾಟದಿಂದ ಜಲ್ಲಿ ಚದುರಿ ಹೋಗಿ ಮತ್ತಷ್ಟು ತೊಂದರೆಯಾಗಿದೆ.

ನಗರದ ರಾಮಸಮುದ್ರದ ಬಡಾವಣೆಯ ಮುಂಭಾಗದ ತಿರುವಿನಲ್ಲಿ ರಸ್ತೆ ಪದೇ ಪದೇ ಕಿತ್ತು ಹೋಗುತ್ತಿದೆ. ಗುಣಮಟ್ಟದ ಡಾಂಬರು ಹಾಕಿ ಸರಿಪಡಿಸುವ ಕೆಲಸವನ್ನು ಸಂಬಂಧಪಟ್ಟವರು ಮಾಡದೆ ಇರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಾಗವಳ್ಳಿಯಲ್ಲಿ ೩ ಕಡೆ ಪೈಪ್‌ಲೈನ್ ಹಾಕಲು ಹೆದ್ದಾರಿಯನ್ನು ೬ ತಿಂಗಳ ಹಿಂದೆಯೇ ಅಗೆದು ಹಳ್ಳ ಮಾಡಲಾಗಿದೆ. ಇನ್ನೂ ಸರಿಯಾಗಿ ಡಾಂಬರು ಹಾಕಿ ಮುಚ್ಚದೆ ಹಾಗೆಯೇ ಬಿಡಲಾಗಿದೆ.

ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿಯ ಹೊಂಡರಬಾಳು ಗ್ರಾಮದ ಬಳಿಯಿಂದ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದೊಳಗೆ ೨೫ ಕಿ.ಮೀ.ಸಾಗಲಿದ್ದು, ಐತಿಹಾಸಿಕ ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸಲಿದೆ.

ಅರಣ್ಯದೊಳಗೆ ಕಿರಿದಾದ ಹೆದ್ದಾರಿಯು ೭-೮ ಕಡೆ ಕಿತ್ತು ಹೋಗಿದೆ. ತಾತ್ಕಾಲಿಕವಾಗಿ ಜಲ್ಲಿ ಮತ್ತು ಎಂ.ಸ್ಯಾಂಡ್ ಬಳಿಸಿ ಮುಚ್ಚಿದರೂ ಮತ್ತೆ ಹಳ್ಳವಾಗಿದೆ. ಜಲ್ಲಿ ಚದುರಿ ಹೋಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಕೆಲವು ಕಡೆ ರಸ್ತೆಯ ಬದಿ ಕೊಚ್ಚಿ ಹೋಗಿ ಮಂಡಿುುಂದ್ದದ ಹಳ್ಳ ಬಿದ್ದಿದೆ. ಬೈಕ್‌ನಲ್ಲಂತೂ ಓಡಾಡಲು ಸರ್ಕಸ್ ವಾಡಬೇಕಿದೆ.

 ವೀಕೆಂಡ್‌ನಲ್ಲಿ ಹೆಚ್ಚು ವಾಹನ ಓಡಾಟ
ಹೆದ್ದಾರಿಯಲ್ಲಿ ಪ್ರತಿನಿತ್ಯ ಕೆಎಸ್‌ಆರ್‌ಟಿಸಿ ಬಸ್ ಚಾಮರಾಜನಗರದಿಂದ – ಬಿಳಿಗಿರಿರಂಗನಬೆಟ್ಟಕ್ಕೆ ಸಂಚರಿಸುತ್ತದೆ. ಪ್ರತಿ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೇವಾಲಯಕ್ಕೆ ಹೋಗಿ ಬರುತ್ತಾರೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಕೆ.ಗುಡಿಯಲ್ಲಿರುವ ಜಂಗಲ್ ರೆಸಾರ್ಟ್‌ಗೆ ತೆರಳುತ್ತಾರೆ. ವಾಸ್ತವ್ಯ ಹೂಡಿ
ಸಫಾರಿ ಹೋಗಿ ಅರಣ್ಯದ ಸೊಬಗು ಸವಿದು ಖುಷಿ ಪಡುತ್ತಾರೆ. ಇನ್ನು ಕೆ.ಗುಡಿ ವಲಯಾರಣ್ಯ ಕಚೇರಿಯ ನಲ್ಲೂರು ಸಮೀಪವಿದ್ದು, ಪ್ರತಿನಿತ್ಯ ಅರಣ್ಯಾಧಿಕಾರಿಗಳ ಜೀಪು, ಸಫಾರಿ ವಾಹನಗಳು ಓಡಾಡುತ್ತವೆ. ಆದರೆ, ಅರಣ್ಯದೊಳಗಿನ ಕಿರಿದಾದ ಹೆದ್ದಾರಿ ಕಿತ್ತು ಹೋಗಿದ್ದರಿಂದ ಚಾಲಕರು ಪ್ರಯಾಸ ಪಡಬೇಕಿದೆ.

 ಹಿತಕರ ವನಸಿರಿ; ಸಂಚಾರ ಕಿರಿಕಿರಿ
ಹೊಂಡರಬಾಳು ಬಳಿಯ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಿಂದ ಹೊರಟರೆ ಗಗನ ಚುಂಬಿ ಮರಗಳು, ಹಸಿರು ನೆಲ, ಅಲ್ಲಲ್ಲಿ ಜಿಂಕೆಗಳ ಪ್ರತ್ಯಕ್ಷ, ಪಕ್ಷಿಗಳ ಕಲರವ, ಜನರು-ವಾಹನಗಳ ಸದ್ದುಗದ್ದಲವಿಲ್ಲದ ತಂಪಾದ ಹಿತಕರ ವಾತಾವರಣ ಕಣ್ಮನ ಸೆಳೆಯುತ್ತದೆ. ಪ್ರಕೃತಿಯು ಸಿರಿ ಮನಸ್ಸಿಗೆ ಹಿತ ನೀಡಿದರೂ ಹೆದ್ದಾರಿ ಮಾತ್ರ ಸಂಚಾರಕ್ಕೆ ಕಿರಿಕಿರಿ ಮಾಡುತ್ತದೆ.

 ಮಳೆಯಿಂದ ಹುಲಿ ಸಂರಕ್ಷಿತಾರಣ್ಯದೊಳಗೆ ಕಿತ್ತುಹೋದ ಹೆದ್ದಾರಿಯನ್ನು ದುರಸ್ತಿ ಮಾಡಿಸಿಕೊಡಿ ಎಂದು ಅರಣ್ಯ ಇಲಾಖೆಯ ವತಿಯಿಂದ ಲೋಕೋಪಯೋಗಿ ಇಲಾಖೆ ಈಗಾಗಲೇ ಮನವಿ ಮಾಡಲಾಗಿದೆ. -ವಿನೋದ್‌ಗೌಡ, ಕೆ.ಗುಡಿ ವಲಯ ಅರಣ್ಯಾಧಿಕಾರಿ.

andolana

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago