ಜಿಲ್ಲೆಗಳು

ಬಿ.ಆರ್.ಹಿಲ್ಸ್ ಹೆದ್ದಾರಿಯಲ್ಲಿ ಕಿತ್ತು ಹೋದ ಡಾಂಬರು

ಜಲ್ಲಿಯಿಂದ ಮುಚ್ಚಿದರೂ ಮತ್ತೆ ಹಳ್ಳ ನಿರ್ವಾಣ; ಸಂಚಾರ ದುಸ್ತರ

ವರದಿ: ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದಿಂದ ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೦)ಯಲ್ಲಿ ಅಲ್ಲಲ್ಲಿ ಡಾಂಬರು ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಕಳೆದ ಮೂರು ತಿಂಗಳಿಂದ ಸುರಿದ ಸತತ ಮಳೆಗೆ ಡಾಂಬರು ಕಿತ್ತು ಬಂದಿದೆ. ಇತ್ತೀಚೆಗೆ ಎಂ.ಸ್ಯಾಂಡ್ ಮತ್ತು ಜಲ್ಲಿ ಮಿಶ್ರಣ ಮಾಡಿ ಹಾಕಿ ಗುಂಡಿಗಳಿಗೆ ತೇಪೆ ಹಾಕಿದ್ದರೂ ಪ್ರೋಂಜನವಾಗಿಲ್ಲ. ವಾಹನಗಳ ಓಡಾಟದಿಂದ ಜಲ್ಲಿ ಚದುರಿ ಹೋಗಿ ಮತ್ತಷ್ಟು ತೊಂದರೆಯಾಗಿದೆ.

ನಗರದ ರಾಮಸಮುದ್ರದ ಬಡಾವಣೆಯ ಮುಂಭಾಗದ ತಿರುವಿನಲ್ಲಿ ರಸ್ತೆ ಪದೇ ಪದೇ ಕಿತ್ತು ಹೋಗುತ್ತಿದೆ. ಗುಣಮಟ್ಟದ ಡಾಂಬರು ಹಾಕಿ ಸರಿಪಡಿಸುವ ಕೆಲಸವನ್ನು ಸಂಬಂಧಪಟ್ಟವರು ಮಾಡದೆ ಇರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ನಾಗವಳ್ಳಿಯಲ್ಲಿ ೩ ಕಡೆ ಪೈಪ್‌ಲೈನ್ ಹಾಕಲು ಹೆದ್ದಾರಿಯನ್ನು ೬ ತಿಂಗಳ ಹಿಂದೆಯೇ ಅಗೆದು ಹಳ್ಳ ಮಾಡಲಾಗಿದೆ. ಇನ್ನೂ ಸರಿಯಾಗಿ ಡಾಂಬರು ಹಾಕಿ ಮುಚ್ಚದೆ ಹಾಗೆಯೇ ಬಿಡಲಾಗಿದೆ.

ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿಯ ಹೊಂಡರಬಾಳು ಗ್ರಾಮದ ಬಳಿಯಿಂದ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದೊಳಗೆ ೨೫ ಕಿ.ಮೀ.ಸಾಗಲಿದ್ದು, ಐತಿಹಾಸಿಕ ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸಲಿದೆ.

ಅರಣ್ಯದೊಳಗೆ ಕಿರಿದಾದ ಹೆದ್ದಾರಿಯು ೭-೮ ಕಡೆ ಕಿತ್ತು ಹೋಗಿದೆ. ತಾತ್ಕಾಲಿಕವಾಗಿ ಜಲ್ಲಿ ಮತ್ತು ಎಂ.ಸ್ಯಾಂಡ್ ಬಳಿಸಿ ಮುಚ್ಚಿದರೂ ಮತ್ತೆ ಹಳ್ಳವಾಗಿದೆ. ಜಲ್ಲಿ ಚದುರಿ ಹೋಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಕೆಲವು ಕಡೆ ರಸ್ತೆಯ ಬದಿ ಕೊಚ್ಚಿ ಹೋಗಿ ಮಂಡಿುುಂದ್ದದ ಹಳ್ಳ ಬಿದ್ದಿದೆ. ಬೈಕ್‌ನಲ್ಲಂತೂ ಓಡಾಡಲು ಸರ್ಕಸ್ ವಾಡಬೇಕಿದೆ.

 ವೀಕೆಂಡ್‌ನಲ್ಲಿ ಹೆಚ್ಚು ವಾಹನ ಓಡಾಟ
ಹೆದ್ದಾರಿಯಲ್ಲಿ ಪ್ರತಿನಿತ್ಯ ಕೆಎಸ್‌ಆರ್‌ಟಿಸಿ ಬಸ್ ಚಾಮರಾಜನಗರದಿಂದ – ಬಿಳಿಗಿರಿರಂಗನಬೆಟ್ಟಕ್ಕೆ ಸಂಚರಿಸುತ್ತದೆ. ಪ್ರತಿ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೇವಾಲಯಕ್ಕೆ ಹೋಗಿ ಬರುತ್ತಾರೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಕೆ.ಗುಡಿಯಲ್ಲಿರುವ ಜಂಗಲ್ ರೆಸಾರ್ಟ್‌ಗೆ ತೆರಳುತ್ತಾರೆ. ವಾಸ್ತವ್ಯ ಹೂಡಿ
ಸಫಾರಿ ಹೋಗಿ ಅರಣ್ಯದ ಸೊಬಗು ಸವಿದು ಖುಷಿ ಪಡುತ್ತಾರೆ. ಇನ್ನು ಕೆ.ಗುಡಿ ವಲಯಾರಣ್ಯ ಕಚೇರಿಯ ನಲ್ಲೂರು ಸಮೀಪವಿದ್ದು, ಪ್ರತಿನಿತ್ಯ ಅರಣ್ಯಾಧಿಕಾರಿಗಳ ಜೀಪು, ಸಫಾರಿ ವಾಹನಗಳು ಓಡಾಡುತ್ತವೆ. ಆದರೆ, ಅರಣ್ಯದೊಳಗಿನ ಕಿರಿದಾದ ಹೆದ್ದಾರಿ ಕಿತ್ತು ಹೋಗಿದ್ದರಿಂದ ಚಾಲಕರು ಪ್ರಯಾಸ ಪಡಬೇಕಿದೆ.

 ಹಿತಕರ ವನಸಿರಿ; ಸಂಚಾರ ಕಿರಿಕಿರಿ
ಹೊಂಡರಬಾಳು ಬಳಿಯ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಿಂದ ಹೊರಟರೆ ಗಗನ ಚುಂಬಿ ಮರಗಳು, ಹಸಿರು ನೆಲ, ಅಲ್ಲಲ್ಲಿ ಜಿಂಕೆಗಳ ಪ್ರತ್ಯಕ್ಷ, ಪಕ್ಷಿಗಳ ಕಲರವ, ಜನರು-ವಾಹನಗಳ ಸದ್ದುಗದ್ದಲವಿಲ್ಲದ ತಂಪಾದ ಹಿತಕರ ವಾತಾವರಣ ಕಣ್ಮನ ಸೆಳೆಯುತ್ತದೆ. ಪ್ರಕೃತಿಯು ಸಿರಿ ಮನಸ್ಸಿಗೆ ಹಿತ ನೀಡಿದರೂ ಹೆದ್ದಾರಿ ಮಾತ್ರ ಸಂಚಾರಕ್ಕೆ ಕಿರಿಕಿರಿ ಮಾಡುತ್ತದೆ.

 ಮಳೆಯಿಂದ ಹುಲಿ ಸಂರಕ್ಷಿತಾರಣ್ಯದೊಳಗೆ ಕಿತ್ತುಹೋದ ಹೆದ್ದಾರಿಯನ್ನು ದುರಸ್ತಿ ಮಾಡಿಸಿಕೊಡಿ ಎಂದು ಅರಣ್ಯ ಇಲಾಖೆಯ ವತಿಯಿಂದ ಲೋಕೋಪಯೋಗಿ ಇಲಾಖೆ ಈಗಾಗಲೇ ಮನವಿ ಮಾಡಲಾಗಿದೆ. -ವಿನೋದ್‌ಗೌಡ, ಕೆ.ಗುಡಿ ವಲಯ ಅರಣ್ಯಾಧಿಕಾರಿ.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago