ಆನಂದ್, ಕೆ.ಎಸ್.ಆರ್.ಪಿ. ಸಹಾಯಕ ಸಬ್ಇನ್ಸ್ಪೆಕ್ಟರ್
ಸೋಮವಾರಪೇಟೆ: ತಾಲ್ಲೂಕಿನ ಹಾನಗಲ್ಲು ಗ್ರಾಮ ನಿವಾಸಿ, ಕೆ.ಎಸ್.ಆರ್.ಪಿ. ಸಹಾಯಕ ಸಬ್ಇನ್ಸ್ಪೆಕ್ಟರ್ರೋರ್ವರು ಹೃದಯಾಘಾತದಿಂದ ಗುರುವಾರ ರಾತ್ರಿ ಹಾಸನದಲ್ಲಿ ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಎಚ್.ಎಂ.ಆನಂದ್(೫೮) ಮೃತಪಟ್ಟವರು. ಕೆಎಸ್ಆರ್ಪಿ ೧೧ನೇ ಬೆಟಾಲಿಯನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ೧೦ಗಂಟೆಗೆ ವಸತಿ ಗೃಹದಲ್ಲಿ ಹೃದಯಾಘಾತವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ಧಾರೆ.
೧೯೯೨ರಲ್ಲಿ ಕೆ.ಎಸ್.ಆರ್.ಪಿ. ಸೇರ್ಪಡೆಗೊಂಡು, ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯ ಎಸ್ಟಿಎಫ್ನಲ್ಲಿ ೫ ವರ್ಷ ಸೇವೆ ಸಲ್ಲಿಸಿದ್ದರು. ಮೈಸೂರು, ಮಂಗಳೂರಿನಲ್ಲಿ ಸೇವೆ ಸಲ್ಲಿಸಿ ಇದೀಗ ಹಾಸನದಲ್ಲಿ ಕರ್ತವ್ಯದಲ್ಲಿದ್ದರು.
ಶುಕ್ರವಾರ ಸಂಜೆ ಹಾನಗಲ್ನ ರುದ್ರಭೂಮಿಯಲ್ಲಿ ಕೆಎಸ್ಆರ್ಪಿ ತುಕಡಿ ವತಿಯಿಂದ ಗೌರವ ವಂದನೆ ಸಲ್ಲಿಸಿ, ಕುಶಲತೋಪು ಹಾರಿಸಲಾಯಿತು. ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್, ಕೆಎಸ್ಆರ್ಪಿಯ ಆರ್ಪಿಐ ವಸಂತ್ ಕುಮಾರ್, ಎಆರ್ಎಸ್ಐ ಲಕ್ಷö್ಮಣ, ಈಶ್ವರಪ್ಪ ಅಂತಿಮ ನಮನ ಸಲ್ಲಿಸಿದರು. ನಂತರ ಅಂತಿಮ ಸಂಸ್ಕಾರ ನಡೆಯಿತು.
ಮೃತರು ತಾಯಿ ಲೀಲಾವತಿ, ಪತ್ನಿ ಸುಮಿತ್ರ ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…