ಜಿಲ್ಲೆಗಳು

ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ

ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಮಿಥಿಕ್ ಸೊಸೈಟಿಗಳ ಸಹಯೋಗದಲ್ಲಿ ಇಲ್ಲಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಹಸ್ತಪ್ರತಿಗಳ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರ’ವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರು ವಿವಿ ಮತ್ತು ಮಿಥಿಕ್ ಸೊಸೈಟಿ 5 ಸಾವಿರ ಹಸ್ತಪ್ರತಿಗಳು ಮತ್ತು 16 ಸಾವಿರ ತಾಳೆಗರಿಗಳ ಡಿಜಿಟಲೀಕರಣ, ಸಂರಕ್ಷಣೆ ಮತ್ತು ಪ್ರಧೂಮೀಕರಣ (ಫ್ಯೂಮಿಗೇಶನ್)ಕ್ಕಾಗಿ 2 ವರ್ಷಗಳ ಒಡಂಬಡಿಕೆ ಮಾಡಿಕೊಂಡಿರುವುದು ರಚನಾತ್ಮಕ ಕ್ರಮವಾಗಿದೆ. ನಾಡಹಬ್ಬದ ಸಂದರ್ಭದಲ್ಲಿ ಮಾಡುವ ಸರಸ್ವತಿ ಪೂಜೆಯು ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಮಹೋದ್ದೇಶದೊಂದಿಗೆ ನಡೆಯುತ್ತಿರುವುದು ಅನುಕರಣಯೋಗ್ಯವಾಗಿದೆ ಎಂದರು.
ಇಂದು ತಂತ್ರಜ್ಞಾನ ಜಗತ್ತನ್ನು ಆಳುತ್ತಿದ್ದು, ಇಡೀ ವ್ಯವಸ್ಥೆ ಜ್ಞಾನಾಧಾರಿತ ಆಗುತ್ತಿದೆ. ಮೈಸೂರು ವಿ.ವಿ.ಯು ಮೂಲತಃ ಪ್ರಾರಂಭವಾದ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ನಾಡಿನ ಸಾಂಸ್ಕೃತಿಕ ಪುನರುತ್ಥಾನದ ಈ ಕಾರ್ಯ ನಡೆಯುತ್ತಿರುವುದಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ ಎಂದು ಅವರು ಶ್ಲಾಘಿಸಿದರು.
ಸದ್ಯಕ್ಕೆ ಇಲ್ಲಿ ಸ್ಥಳೀಯರನ್ನು ಬಳಸಿಕೊಂಡು ತಾಳೆಗರಿಗಳನ್ನು ಸ್ಚಚ್ಛ ಮಾಡುವ ಕೆಲಸ ನಡೆಯುತ್ತಿದೆ. ಇವುಗಳನ್ನೆಲ್ಲ ನಾವು ತಂತ್ರಜ್ಞಾನದ ಬಲದಿಂದ ಉಳಿಸಿಕೊಳ್ಳುವುದು ಈಗ ಸುಲಭವಾಗಿದೆ. ಆದ್ದರಿಂದ ಯುವ ತಲೆಮಾರಿನ ವಿದ್ವಾಂಸರು ಕೂಡ ಶಾಸನಗಳು, ಲಿಪಿಗಳು, ಹಸ್ತಪ್ರತಿಗಳು ಮತ್ತು ತಾಳೆಗರಿಗಳನ್ನು ಅಧ್ಯಯನ ಮಾಡುವ ಅಭಿಜಾತ ಕುತೂಹಲವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಈ ಸಂಸ್ಥೆಯಲ್ಲಿ ಸುಮಾರು 800-900 ವರ್ಷಗಳಷ್ಟು ಹಳೆಯ ತಾಳೆಗರಿಗಳಿವೆ. ಇವು ಒಂದು ನಾಡಿನ ಮತ್ತು ದೇಶದ ಕತೆಯನ್ನೇ ಕಟ್ಟಿಕೊಡುತ್ತವೆ. ಆಯಾ ಕಾಲಘಟ್ಟದ ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತಿತರ ಆಯಾಮಗಳ ಬಗ್ಗೆ ತಿಳಿದುಕೊಳ್ಳಲು ಇವು ಪ್ರಮುಖ ಆಕರಗಳಾಗಿವೆ. ಇಂತಹ ಪ್ರಾಚ್ಯ ಸಂಪತ್ತು ಕನ್ನಡ ನಾಡಿನಲ್ಲಿರುವಷ್ಟು ಬೇರೆ ಕಡೆಗಳಲ್ಲಿ ಇಲ್ಲ. ಇದನ್ನು ನಾವು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.
ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿರುವ ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯು ಸ್ವಾತಂತ್ರೋತ್ತರ ಭಾರತದಲ್ಲಿ ಜಾರಿಯಾಗುತ್ತಿರುವ ಅತ್ಯಂತ ಜನಪರ ಮತ್ತು ಭರವಸೆದಾಯಕ ನೀತಿಯಾಗಿದೆ. ಇದರಿಂದಾಗಿ ಶೈಕ್ಷಣಿಕ ವಲಯದಲ್ಲಿ ಅಭೂತಪೂರ್ವ ಬದಲಾವಣೆಗಳು ಬರುತ್ತಿದ್ದು, ಸಮಾಜದ ಸಮಸ್ಯೆಗಳು ಇನ್ನು ಕೆಲವೇ ವರ್ಷಗಳಲ್ಲಿ ನಿರ್ಮೂಲನೆಯಾಗಿ ಹೋಗಲಿವೆ ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊಹೇಮಂತಕುಮಾರ್, ಪ್ರಾಚ್ಯ ವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ.ರಾಮಪ್ರಿಯ, ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ, ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ವಿ.ನಾಗರಾಜ್‌, ಮೈಸೂರು ವಿವಿ ಕುಲಸಚಿವ ಪ್ರೊ.ಆರ್. ಶಿವಪ್ಪ ಉಪಸ್ಥಿತರಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago