ಅಣ್ಣೂರು ಕೇರಿ ಗ್ರಾಮದ ಬಳಿ ರಸ್ತೆುಂ ತಿರುವಿನಲ್ಲಿ ಗಿಡಗಂಟಿಗಳು ಚಾಚಿಕೊಂಡಿರುವುದು.
ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ ರಸ್ತೆ ಎಂದೇ ಗುರುತಿಸಿಕೊಂಡಿರುವ ಗುಂಡ್ಲುಪೇಟೆ-ಬಾಚಹಳ್ಳಿ ಸಂಪರ್ಕ ರಸ್ತೆಯ ಬದಿಯಲ್ಲಿ ಗಿಡಗಂಟಿಗಳು ಬೆಳೆದು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.
ಗುಂಡ್ಲುಪೇಟೆಯಿಂದ ಅಣ್ಣೂರುಕೇರಿ, ಶಿವಪುರ, ಹುಲ್ಲೇಪುರ, ಚೌಡಹಳ್ಳಿ, ಬೆಳವಾಡಿ, ಬೊಮ್ಮಲಾಪುರ, ಅಂಕಹಳ್ಳಿ, ಬಾಚಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುವಾರು ೨೦ ಕಿ.ಮೀ.ಅಂತರದ ಈ ರಸ್ತೆಯ ಬದಿಯಲ್ಲಿ ಜಾಲಿ ಮುಳ್ಳು, ಪಾರ್ಥೇನಿಯಂ, ಲಂಟಾನ ಬೆಳೆದು ನಿಂತಿವೆ. ಇದರಿಂದ ಓಡಾಡುವ ವಾಹನಗಳಿಗೆ, ಪ್ರಯಾಣಿಕರಿಗೆ ತಾಕುತ್ತಿದ್ದು ಸಂಚರಿಸಲು ಪ್ರಾಯಾಸಪಡಬೇಕಿದೆ.
ಅಪಘಾತಕ್ಕೂ ಆಹ್ವಾನ: ಕಿರಿದಾದ ಈ ರಸ್ತೆಯಲ್ಲಿ ಹತ್ತಾರು ತಿರುವುಗಳಿವೆ. ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ನಿಂತಿರುವುದರಿಂದ ತಿರುವುಗಳಲ್ಲಿ ಎದುರಿಗೆ ಬರುವ ವಾಹನಗಳು ಕಾಣಿಸುವುದೇ ಇಲ್ಲ. ಈ ಪರಿಸ್ಥಿತಿ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.
ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯಲ್ಲಿ ಪ್ರತಿನಿತ್ಯ ಕೆಎಸ್ಆರ್ಟಿಸಿ ಬಸ್, ಶಾಲೆ, ಸರಕು ಸಾಗಣೆ ವಾಹನಗಳು ಹೆಚ್ಚಾಗಿ ಓಡಾಡುತ್ತವೆ. ಬೈಕ್ಗಳಂತೂ ಲೆಕ್ಕವಿಲ್ಲದಷ್ಟು ಓಡಾಡುತ್ತಿದ್ದು, ಸವಾರರು ಜಾಲಿ ಮುಳ್ಳುಗಳಿಂದ ಚುಚ್ಚಿಸಿಕೊಂಡು ಸಂಬಂಧಿಸಿದವರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಾಹನಗಳು ಎದುರುದಾಗ ಬದಿಗೆ ಹೋದರೆ ಗಿಡಗಂಟಿಗಳಿಂದ ಚುಚ್ಚಿಸಿಕೊಳ್ಳಬೇಕಿದೆ.
ಈ ರಸ್ತೆಯುದ್ದಕ್ಕೂ ಸಿಗುವ ೮-೧೦ ಗ್ರಾಮಗಳ ವಿದ್ಯಾರ್ಥಿಗಳು ಓದಲು ಮತ್ತು ನಿವಾಸಿಗಳು ಅಗತ್ಯ ವಸ್ತುಗಳನ್ನು ಖರೀದಿಸಲು ಬೊಮ್ಮಲಾಪುರ ಮತ್ತು ಗುಂಡ್ಲುಪೇಟೆ ಪಟ್ಟಣಕ್ಕೆ ಹೋಗಿ ಬರುತ್ತಾರೆ. ರಾತ್ರಿ ವೇಳೆಯಂತೂ ರಸ್ತೆಯಲ್ಲಿ ಓಡಾಡುವುದೇ ದುಸ್ತರ. ಕಳೆದ ೩ ತಿಂಗಳ ಅವಧಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಳೆಗಿಡಗಳು ರಸ್ತೆ ಬದಿಯಲ್ಲಿ ಹುಲುಸಾಗಿ ಬೆಳೆದು ನಿಂತಿವೆ.
ರಸ್ತೆಯೇನೊ ಓಡಾಡಲು ಚೆನ್ನಾಗಿದೆ. ಆದರೆ, ಕಿರಿದಾಗಿದ್ದು ದೊಡ್ಡ ವಾಹನಗಳು ಎದುರಿಗೆ ಬಂದರೆ ಪಕ್ಕಕ್ಕೆ ಸರಿದುಕೊಳ್ಳಲು ಪರದಾಡಬೇಕಿದೆ. ಬದಿಗೆ ಸರಿಯಲು ಮುಂದಾದರೆ ಗಿಡಗಂಟಿಗಳ ಕಾಟ, ಇಲ್ಲವೇ ವಾಹನಕ್ಕೆ ಡಿಕ್ಕಿ ಹೊಡೆಯಬೇಕಾದ ಅನಿವಾರ್ಯತೆಯಿಂದ ಪ್ರಯಾಣಿಕರು ಜೀವ ಕೈಲಿಡಿದುಕೊಂಡು ಸಂಚರಿಸುವ ಉದ್ಭವವಾಗಿದೆ.
ಇದೇ ರಸ್ತೆಯಲ್ಲಿ ಸ್ವಗ್ರಾಮಕ್ಕೆ ತೆರಳುವ ಶಾಸಕರು
ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾದ ಸಿ.ಎಸ್.ನಿರಂಜನಕುಮಾರ್ ತಮ್ಮ ಸ್ವಗ್ರಾಮ ಚೌಡಹಳ್ಳಿಗೆ ಗುಂಡ್ಲುಪೇಟೆ-ಅಣ್ಣೂರಿಕೇರಿ-ಶಿವಪುರ-ಹುಲ್ಲೇಪುರ ಮೂಲಕ ತೆರಳುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಆಗಮಿಸುವ ಶಾಸಕರು ಅಧಿಕಾರಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರ ಸಭೆ, ಸಮಾರಂಭ ನಡೆಸಿ ಸ್ವಗ್ರಾಮಕ್ಕೆ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಇದಲ್ಲದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಆಗೊಮ್ಮೆ, ಈಗೊಮ್ಮೆ ಈ ರಸ್ತೆಯಲ್ಲಿ ಶಾಸಕರೊಡನೆ ಓಡಾಡುತ್ತಾರೆ. ಈ ಸಮಸ್ಯೆ ಇವರುಗಳ ಗಮನಕ್ಕೆ ಬಂದಿಲ್ಲವೇ ? ಇನ್ನಾದರೂ ಇತ್ತ ಗಮನಹರಿಸಬೇಕು ಎಂಬುದು ನಿವಾಸಿಗಳ ಆಗ್ರಹವಾಗಿದೆ.
ಹೆಚ್ಚು ವಾಹನಗಳು ಓಡಾಡುವ ಈ ರಸ್ತೆ ಬದಿಯಲ್ಲಿ ಜಾಲಿಮುಳ್ಳು ಬೆಳೆದುನಿಂತು ಚಾಚಿಕೊಂಡು ಸವಾರರಿಗೆ ಬಡಿಯುತ್ತಿವೆ. ಬೈಕ್ ಸವಾರರು, ಸರಕು ಸಾಗಣೆ ವಾಹನಗಳಲ್ಲಿ ಓಡಾಡುವವರ ಪರಿಸ್ಥಿತಿ ಹೇಳತೀರದು. ಬೇಗ ರಸ್ತೆ ಬದಿಯ ಗಿಡಗಂಟಿಗಳನ್ನು ತೆರವು ಮಾಡಿಸಬೇಕು. -ಸದಾಶಿವಮೂರ್ತಿ, ಚೌಡಹಳ್ಳಿ
ಇದೊಂದೇ ರಸ್ತೆಯಲ್ಲ ಸುಮಾರು ರಸ್ತೆಗಳಲ್ಲಿ ಇಂತಹ ಸಮಸ್ಯೆಯಿದೆ. ರಸ್ತೆ ನಿರ್ವಹಣೆಗೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬಿಡುಗಡೆಯಾದ ತಕ್ಷಣ ಜಂಗಲ್ ಕಟಿಂಗ್ ಮಾಡಿಸಲಾಗುವುದು. – ರಾಮಚಂದ್ರ, ಎಇಇ, ಲೋಕೋಪೋಂಗಿ ಇಲಾಖೆ
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…