ಮೈಸೂರು: ನಗರದ ಆಡಳಿತ ತರಬೇತಿ ಸಂಸ್ಥೆಯ (ಎಐಟಿ) ಅತಿಥಿ ಗೃಹದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ಸು ನೀಡುವಂತೆ ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದೆ.
ಆಡಳಿತ ತರಬೇತಿ ಸಂಸ್ಥೆ ಅತಿಥಿ ಗೃಹದಲ್ಲಿ 2020ರಲ್ಲಿ ವಾಸ್ತವ್ಯ ಹೂಡಿದ್ದ ಅಧಿಕಾರಿ ರೋಹಿಣಿ ಸಿಂಧೂರಿ, ಅಲ್ಲಿನ 12 ಬಗೆಯ 20 ವಸ್ತುಗಳನ್ನು ಜಿಲ್ಲಾಧಿಕಾರಿ ನಿವಾಸಕ್ಕೆ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ ಕೊಡುವಂತೆ ಸಂಸ್ಥೆಯು ಪತ್ರದಲ್ಲಿ ತಿಳಿಸಿದೆ.
ಸಂಸ್ಥೆಯ ಜಂಟಿ ನಿರ್ದೇಶಕರ ಕಚೇರಿಯಿಂದ ನ.30ರಂದು ಪತ್ರ ಬರೆಯಲಾಗಿದೆ. ಹೀಗೆ ಪತ್ರ ಬರೆಯುತ್ತಿರುವುದು ಇದು 4ನೇ ಬಾರಿಯಾಗಿದೆ. 2020ರ ಡಿ.16, 2021ರ ಜ.8 ಹಾಗೂ ಏ.21ರಲ್ಲೂ ಸಂಸ್ಥೆ ಪತ್ರ ಬರೆದಿತ್ತು ಎಂದು ತಿಳಿದುಬಂದಿದೆ.
2020ರ ಅ.2ರಿಂದ 2020ರ ನ.14ರವರೆಗೆ ಆಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಜಿಲ್ಲಾಧಿಕಾರಿ ನಿವಾಸಕ್ಕೆ ವಸ್ತುಗಳನ್ನು ಸ್ಥಳಾಂತರಿಸುವಾಗ ಅತಿಥಿಗೃಹದ 2 ಟೆಲಿಫೋನ್ ಟೇಬಲ್, 2 ಬಟ್ಟೆ ಹ್ಯಾಂಗರ್, 2 ಬೆತ್ತದ ಕುರ್ಚಿ, 2 ಟೆಲಿಫೋನ್ ಸ್ಟೂಲ್, 2 ಟೀಪಾಯಿ, ಒಂದು ಮೈಕ್ರೋವೇವ್ ಒವನ್, ರಿಸೆಪ್ಶನ್ ಟೆಲಿಫೋನ್ ಸ್ಟೂಲ್, ಮಂಚ, ಹಾಸಿಗೆ, 2 ಪ್ಲಾಸ್ಟಿಕ್ ಕುರ್ಚಿ, 2 ಯೋಗಾ ಮ್ಯಾಟ್, 2 ಸ್ಟೀಲ್ ಜಗ್ ಕೊಂಡೊಯ್ದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರೋಹಿಣಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಪತ್ರ ಬರೆದಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಿಲ್ಲಾಧಿಕಾರಿ ನಿವಾಸದಲ್ಲಿ ಪರಿಕರಗಳು ಇದ್ದಲ್ಲಿ, ವಾಪಸ್ ನೀಡುವಂತೆ ಇದೀಗ ಮತ್ತೊಮ್ಮೆ ಕೋರಲಾಗಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…
ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…
ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಇಂದು ನವದೆಹಲಿಯಲ್ಲಿ…
ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್ಎಲ್ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…