ಜಿಲ್ಲೆಗಳು

ಎಟಿಐ ಪರಿಕರ ವಾಪಸ್‌ ನೀಡಿ: ರೋಹಿಣಿ ಸಿಂಧೂರಿಗೆ ಎಟಿಐ ಪತ್ರ

ಮೈಸೂರು: ನಗರದ ಆಡಳಿತ ತರಬೇತಿ ಸಂಸ್ಥೆಯ (ಎಐಟಿ) ಅತಿಥಿ ಗೃಹದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ಸು ನೀಡುವಂತೆ ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದೆ.

ಆಡಳಿತ ತರಬೇತಿ ಸಂಸ್ಥೆ ಅತಿಥಿ ಗೃಹದಲ್ಲಿ 2020ರಲ್ಲಿ ವಾಸ್ತವ್ಯ ಹೂಡಿದ್ದ ಅಧಿಕಾರಿ ರೋಹಿಣಿ ಸಿಂಧೂರಿ, ಅಲ್ಲಿನ 12 ಬಗೆಯ 20 ವಸ್ತುಗಳನ್ನು ಜಿಲ್ಲಾಧಿಕಾರಿ ನಿವಾಸಕ್ಕೆ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ ಕೊಡುವಂತೆ ಸಂಸ್ಥೆಯು ಪತ್ರದಲ್ಲಿ ತಿಳಿಸಿದೆ.

ಸಂಸ್ಥೆಯ ಜಂಟಿ ನಿರ್ದೇಶಕರ ಕಚೇರಿಯಿಂದ ನ.30ರಂದು ಪತ್ರ ಬರೆಯಲಾಗಿದೆ. ಹೀಗೆ ಪತ್ರ ಬರೆಯುತ್ತಿರುವುದು ಇದು 4ನೇ ಬಾರಿಯಾಗಿದೆ. 2020ರ ಡಿ.16, 2021ರ ಜ.8 ಹಾಗೂ ಏ.21ರಲ್ಲೂ ಸಂಸ್ಥೆ ಪತ್ರ ಬರೆದಿತ್ತು ಎಂದು ತಿಳಿದುಬಂದಿದೆ.

2020ರ ಅ.2ರಿಂದ 2020ರ ನ.14ರವರೆಗೆ ಆಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಜಿಲ್ಲಾಧಿಕಾರಿ ನಿವಾಸಕ್ಕೆ ವಸ್ತುಗಳನ್ನು ಸ್ಥಳಾಂತರಿಸುವಾಗ ಅತಿಥಿಗೃಹದ 2 ಟೆಲಿಫೋನ್‌ ಟೇಬಲ್‌, 2 ಬಟ್ಟೆ ಹ್ಯಾಂಗರ್, 2 ಬೆತ್ತದ ಕುರ್ಚಿ, 2 ಟೆಲಿಫೋನ್‌ ಸ್ಟೂಲ್‌, 2 ಟೀಪಾಯಿ, ಒಂದು ಮೈಕ್ರೋವೇವ್ ಒವನ್‌, ರಿಸೆಪ್ಶನ್ ಟೆಲಿಫೋನ್‌ ಸ್ಟೂಲ್‌, ಮಂಚ, ಹಾಸಿಗೆ, 2 ಪ್ಲಾಸ್ಟಿಕ್‌ ಕುರ್ಚಿ, 2 ಯೋಗಾ ಮ್ಯಾಟ್‌, 2 ಸ್ಟೀಲ್‌ ಜಗ್‌ ಕೊಂಡೊಯ್ದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರೋಹಿಣಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಪತ್ರ ಬರೆದಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಿಲ್ಲಾಧಿಕಾರಿ ನಿವಾಸದಲ್ಲಿ ಪರಿಕರಗಳು ಇದ್ದಲ್ಲಿ, ವಾಪಸ್‌ ನೀಡುವಂತೆ ಇದೀಗ ಮತ್ತೊಮ್ಮೆ ಕೋರಲಾಗಿದೆ.

andolanait

Recent Posts

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

40 mins ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

46 mins ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

2 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

3 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

3 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago