ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ.
ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮತ್ತೊಂದೆಡೆ ಬೆಟ್ಟದ ಅಭಿವೃದ್ಧಿ ಯನ್ನು ವಿರೋಧಿಸಿ ‘ಚಾಮುಂಡಿ ಬೆಟ್ಟ ಉಳಿಸಿ’ ಸಮಿತಿ ಸದಸ್ಯರು ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಚಾಮುಂಡೇಶ್ವರಿ ತೆಪ್ಪೋತ್ಸವದ ಬಳಿಕೆ ಕೆರೆಯಲ್ಲಿದ್ದ ಕಲುಷಿತ ನೀರನ್ನು ಹೊರಹಾಕಿ, ಒಳ ಭಾಗದಲ್ಲಿ ಹೂಳು ತೆಗೆಯಲಾಗುತ್ತಿದೆ. ಕೆರೆಯ ಸುತ್ತಲೂ ಅಲ್ಲಲ್ಲಿ ಕಲ್ಲುಗಳು ಕುಸಿದಿದ್ದು, ಅದನ್ನು ತಡೆಯಲು ಕಾಂಕ್ರಿಟ್ ಸ್ಲ್ಯಾಬ್ ಕಟ್ಟಲಾಗುತ್ತದೆ. ಬಳಿಕ ಮಣ್ಣು ಕುಸಿದ ಜಾಗದಲ್ಲಿ ಹೊಸ ಕಲ್ಲುಗಳನ್ನು ಜೋಡಿಸಲಾಗುವುದು. ಕೆರೆ ಒಳ ಭಾಗದಲ್ಲಿ ಬಾವಿಯ ತನಕ ಮಾತ್ರ ‘ನಡಿಗೆ ಪಥ’ವಿದೆ. ಹೊಸ ಯೋಜನೆಯಂತ, ಒಳ ಭಾಗದಲ್ಲಿ ಪೂರ್ತಿ ಸುತ್ತ ‘ನಡಿಗೆ ಪಥ’ ತಾಗಿಕೊಂಡು ಬೇಲಿಯನ್ನು ನಿರ್ಮಿಸಲಾಗುತ್ತದೆ. ಈಗಿರುವ ಆವರಣ ಗೋಡೆ ಮೇಲ್ಭಾಗದಲ್ಲಿಯೂ ಮೇ ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ನಿರ್ಧರಿಸಲಾಗಿದ್ದು, ಜೂನ್ ವೇಳೆಗೆ ಮಳೆ ನೀರು ಹರಿದು ಬರಲಿದೆ. ಕೆರೆ ಕಾಮಗಾರಿ ಮುಗಿದ ಬಳಿಕ ಚಾಮುಂಡಿಬೆಟ್ಟದ ಮೇಲ್ಭಾಗದಿಂದ ಕೆರೆಯವರೆಗೂ ಬೀದಿ ದೀಪದ ವ್ಯವಸ್ಥೆ, ಬೋಟಿಂಗ್ ಹೌಸ್ ಸುತ್ತ ರಿಪೇರಿ ಕಾರ್ಯ, ಭಕ್ತರಿಗೆ ಕುರ್ಚಿ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಮತ್ತಷ್ಟು ಸೌಂದರ್ಯಕರಣಗೊಳಿಸುವ ಕಾರ್ಯ ನಡೆಯಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈಶ್ವರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…