ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ.
ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮತ್ತೊಂದೆಡೆ ಬೆಟ್ಟದ ಅಭಿವೃದ್ಧಿ ಯನ್ನು ವಿರೋಧಿಸಿ ‘ಚಾಮುಂಡಿ ಬೆಟ್ಟ ಉಳಿಸಿ’ ಸಮಿತಿ ಸದಸ್ಯರು ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಚಾಮುಂಡೇಶ್ವರಿ ತೆಪ್ಪೋತ್ಸವದ ಬಳಿಕೆ ಕೆರೆಯಲ್ಲಿದ್ದ ಕಲುಷಿತ ನೀರನ್ನು ಹೊರಹಾಕಿ, ಒಳ ಭಾಗದಲ್ಲಿ ಹೂಳು ತೆಗೆಯಲಾಗುತ್ತಿದೆ. ಕೆರೆಯ ಸುತ್ತಲೂ ಅಲ್ಲಲ್ಲಿ ಕಲ್ಲುಗಳು ಕುಸಿದಿದ್ದು, ಅದನ್ನು ತಡೆಯಲು ಕಾಂಕ್ರಿಟ್ ಸ್ಲ್ಯಾಬ್ ಕಟ್ಟಲಾಗುತ್ತದೆ. ಬಳಿಕ ಮಣ್ಣು ಕುಸಿದ ಜಾಗದಲ್ಲಿ ಹೊಸ ಕಲ್ಲುಗಳನ್ನು ಜೋಡಿಸಲಾಗುವುದು. ಕೆರೆ ಒಳ ಭಾಗದಲ್ಲಿ ಬಾವಿಯ ತನಕ ಮಾತ್ರ ‘ನಡಿಗೆ ಪಥ’ವಿದೆ. ಹೊಸ ಯೋಜನೆಯಂತ, ಒಳ ಭಾಗದಲ್ಲಿ ಪೂರ್ತಿ ಸುತ್ತ ‘ನಡಿಗೆ ಪಥ’ ತಾಗಿಕೊಂಡು ಬೇಲಿಯನ್ನು ನಿರ್ಮಿಸಲಾಗುತ್ತದೆ. ಈಗಿರುವ ಆವರಣ ಗೋಡೆ ಮೇಲ್ಭಾಗದಲ್ಲಿಯೂ ಮೇ ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ನಿರ್ಧರಿಸಲಾಗಿದ್ದು, ಜೂನ್ ವೇಳೆಗೆ ಮಳೆ ನೀರು ಹರಿದು ಬರಲಿದೆ. ಕೆರೆ ಕಾಮಗಾರಿ ಮುಗಿದ ಬಳಿಕ ಚಾಮುಂಡಿಬೆಟ್ಟದ ಮೇಲ್ಭಾಗದಿಂದ ಕೆರೆಯವರೆಗೂ ಬೀದಿ ದೀಪದ ವ್ಯವಸ್ಥೆ, ಬೋಟಿಂಗ್ ಹೌಸ್ ಸುತ್ತ ರಿಪೇರಿ ಕಾರ್ಯ, ಭಕ್ತರಿಗೆ ಕುರ್ಚಿ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಮತ್ತಷ್ಟು ಸೌಂದರ್ಯಕರಣಗೊಳಿಸುವ ಕಾರ್ಯ ನಡೆಯಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈಶ್ವರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…