ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ.
ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮತ್ತೊಂದೆಡೆ ಬೆಟ್ಟದ ಅಭಿವೃದ್ಧಿ ಯನ್ನು ವಿರೋಧಿಸಿ ‘ಚಾಮುಂಡಿ ಬೆಟ್ಟ ಉಳಿಸಿ’ ಸಮಿತಿ ಸದಸ್ಯರು ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಚಾಮುಂಡೇಶ್ವರಿ ತೆಪ್ಪೋತ್ಸವದ ಬಳಿಕೆ ಕೆರೆಯಲ್ಲಿದ್ದ ಕಲುಷಿತ ನೀರನ್ನು ಹೊರಹಾಕಿ, ಒಳ ಭಾಗದಲ್ಲಿ ಹೂಳು ತೆಗೆಯಲಾಗುತ್ತಿದೆ. ಕೆರೆಯ ಸುತ್ತಲೂ ಅಲ್ಲಲ್ಲಿ ಕಲ್ಲುಗಳು ಕುಸಿದಿದ್ದು, ಅದನ್ನು ತಡೆಯಲು ಕಾಂಕ್ರಿಟ್ ಸ್ಲ್ಯಾಬ್ ಕಟ್ಟಲಾಗುತ್ತದೆ. ಬಳಿಕ ಮಣ್ಣು ಕುಸಿದ ಜಾಗದಲ್ಲಿ ಹೊಸ ಕಲ್ಲುಗಳನ್ನು ಜೋಡಿಸಲಾಗುವುದು. ಕೆರೆ ಒಳ ಭಾಗದಲ್ಲಿ ಬಾವಿಯ ತನಕ ಮಾತ್ರ ‘ನಡಿಗೆ ಪಥ’ವಿದೆ. ಹೊಸ ಯೋಜನೆಯಂತ, ಒಳ ಭಾಗದಲ್ಲಿ ಪೂರ್ತಿ ಸುತ್ತ ‘ನಡಿಗೆ ಪಥ’ ತಾಗಿಕೊಂಡು ಬೇಲಿಯನ್ನು ನಿರ್ಮಿಸಲಾಗುತ್ತದೆ. ಈಗಿರುವ ಆವರಣ ಗೋಡೆ ಮೇಲ್ಭಾಗದಲ್ಲಿಯೂ ಮೇ ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ನಿರ್ಧರಿಸಲಾಗಿದ್ದು, ಜೂನ್ ವೇಳೆಗೆ ಮಳೆ ನೀರು ಹರಿದು ಬರಲಿದೆ. ಕೆರೆ ಕಾಮಗಾರಿ ಮುಗಿದ ಬಳಿಕ ಚಾಮುಂಡಿಬೆಟ್ಟದ ಮೇಲ್ಭಾಗದಿಂದ ಕೆರೆಯವರೆಗೂ ಬೀದಿ ದೀಪದ ವ್ಯವಸ್ಥೆ, ಬೋಟಿಂಗ್ ಹೌಸ್ ಸುತ್ತ ರಿಪೇರಿ ಕಾರ್ಯ, ಭಕ್ತರಿಗೆ ಕುರ್ಚಿ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಮತ್ತಷ್ಟು ಸೌಂದರ್ಯಕರಣಗೊಳಿಸುವ ಕಾರ್ಯ ನಡೆಯಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈಶ್ವರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…