ಜಿಲ್ಲೆಗಳು

ಪೊಲೀಸ್ ಬಲ ಪ್ರಯೋಗಿಸಿ ರೈತರ ಹೋರಾಟ ಹತ್ತಿಕ್ಕಲು ಯತ್ನ

ರೈತರ ಬಂಧನ, ವೇದಿಕೆ ಚೆಲ್ಲಾಪಿಲ್ಲಿ, ಶಾಮಿಯಾನ ನೆಲಸಮ * ಸರ್ಕಾರದ ದಮನಕಾರಿ ನೀತಿಯ ವಿರುದ್ಧ ರೈತರ ವ್ಯಾಪಕ ಆಕ್ರೋಶ

ಮಂಡ್ಯ: ಟನ್ ಕಬ್ಬಿಗೆ ೪೫೦೦ ರೂ. ನಿಗಧಿ, ಲೀಟರ್ ಹಾಲಿಗೆ ೪೦ ರೂ. ದರ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿದ್ದ್ದ ರೈತರ ಹೋರಾಟವನ್ನು ಪೊಲೀಸ್ ಬಲ ಪ್ರಯೋಗಿಸಿ ಬಿಜೆಪಿ ಸರ್ಕಾರ ದಮನಿಸುವ ಪ್ರಯತ್ನ ಮಾಡಿದೆ.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ ೫೧ ದಿನದಿಂದ ರೈತರು ಹೋರಾಟ ಮುಂದುವರೆಸಿದ್ದರು, ಇಂದು ಮುಖ್ಯಮಂತ್ರಿ ಭಾವಚಿತ್ರಕ್ಕೆ ರಕ್ತಾಭಿಷೇಕ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಹೋರಾಟ ನಿರತ ರೈತರನ್ನು ಬಂದಿಸಿ, ವೇದಿಕೆಯನ್ನು ಕಿತ್ತೊಗೆದು ಶಾಮಿಯಾನವನ್ನು ನೆಲಸಮ ಮಾಡಿದ್ದಾರೆ. ಧರಣಿ ಸ್ಥಳದಲ್ಲಿದ್ಧ ರಾಷ್ಟ್ರ ನಾಯಕರ ಫೋಟೋಗಳನ್ನು ಅಡ್ಡದಿಡ್ಡಿ ಬಿಸಾಕಿದ್ದಾರೆ.
ಹೋರಾಟ ನಿರತ ರೈತರ ಮೇಲೆ ಪೊಲೀಸರು ಬಲ ಪ್ರಯೋಗಿಸಿದ್ದು, ನೋಕಾಡಿ, ತಳ್ಳಾಡಿ ರೈತರನ್ನು ಎಳೆದೊಯ್ದಿ ದ್ದಾರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಎರಡು ದಿನ ಮುನ್ನವೇ ಹೋರಾಟ ನಿರತ ರೈತರ ಮೇಲೆ ಬಿಜೆಪಿ ಸರ್ಕಾರ ದಮನಕಾರಿ ನೀತಿ ಮೂಲಕ ಹೋರಾಟವನ್ನು ಹತ್ತಿಕ್ಕಿರುವುದಕ್ಕೆ ರೈತ ಸಮುದಾಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ಹೋರಾಟ ನಿರತರಾಗಿದ್ದ ರೈತರು, ೫೧ನೇ ದಿನವೂ ಧರಣಿ ಮುಂದುವರಿಸಿದ್ದರು. ವಿಭಿನ್ನ ಪ್ರತಿಭಟನೆಗೆ ಮುಂದಾಗಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವನ್ನು ಇಟ್ಟು ಸಿರಿಂಜ್ ಮೂಲಕ ತಮ್ಮ ದೇಹದ ರಕ್ತವನ್ನು ಹೊರ ತೆಗೆದು ಅಭಿಷೇಕ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬಂಧನಕ್ಕೆ ಮೊದಲೇ ಸಿದ್ಧವಾಗಿ ಬಂದಿದ್ದ ಪೊಲೀಸರು ಬಲ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಎಳೆದೊಯ್ದರು.
ರೈತರ ಬಂಧನದ ನಂತರ ಕೆಲ ಹೊತ್ತಲ್ಲೇ ಪ್ರತಿಭಟನಾ ಸ್ಥಳದಲ್ಲಿದ್ದ ವೇದಿಕೆ ಚಿಲ್ಲಾಪಿಲ್ಲಿ ಮಾಡಿ, ಶಾಮಿಯಾನ ಕಿತ್ತೆಸೆದರು, ಅವಸರದಲ್ಲಿ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಉದ್ಯಾನವನದ ಆವರಣ ಗೋಡೆ ಕಡೆಗ ಹಾಕಿದ್ದು, ಹೋರಾಟಗಾರ ಸುಂದರೇಶ್‌ರ ಭಾವಚಿತ್ರ ನೆಲದ ಮೇಲೆ ಬಿದ್ದಿದ್ದರೆ, ಮಹಾತ್ಮ ಗಾಂಧೀಜಿರ ಭಾವಚಿತ್ರ ಚೇರಿನ ಮೇಲೆ ಅಂಗಾತ ಬಿದ್ದಿತ್ತು, ಅಂಬೇಡ್ಕರ್, ಪ್ರೊ.ಕೆ.ಎಸ್.ನಂಜುಂಡಸ್ವಾಮಿ, ಕೆ.ಎಸ್.ಪುಟ್ಟಣ್ಣಯ್ಯ ಅವರ ಭಾವಚಿತ್ರ ಮೇಲಿದ್ದವು. ಸಾರ್ವಜನಿಕರು ರಾಷ್ಟ್ರ ನಾಯಕರ ಭಾವಚಿತ್ರವನ್ನು ಬಿಸಾಡಿರುವ ಬಗ್ಗೆ ಕಿಡಿಕಾರಿದಾಗ ಪೊಲೀಸರು ಫೋಟೋಗಳನ್ನು ಟೆಂಪೋದೊಳಗೆ ಹಾಕಿದರು.
ಪ್ರತಿಭಟನಾ ಸ್ಥಳದಲ್ಲಿದ್ದ ಅಸ್ತವ್ಯಸ್ತವನ್ನು ನೋಡಿದರೆ ಪೊಲೀಸರು ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶ ಹೊಂದಿದ್ದರೆ ವಿನಹ ಕಾನೂನಾತ್ಮಕ ಪ್ರಕ್ರಿಯೆಯನ್ನು ನಡೆಸಲು ಬಂದಿರಲಿಲ್ಲ ಎಂಬುದು ತೋರ್ಪಡಿಸುತ್ತಿತ್ತು, ವೇದಿಕೆಗೆ ಹಾಕಲಾಗಿದ್ದ ಬೆಂಚ್, ಶಾಮಿಯಾನ ಹಾಗೂ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಟೆಂಪೋಗೆ ಪೋಲಿಸ್ ಸಿಬ್ಬಂದಿ ತುಂಬಿಕೊAಡು ಹೊರಟರು, ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ತರಾತುರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಎಲ್ಲವೂ ನಡೆದಿದ್ದು, ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ತೋರ್ಪಡಿಸಿದೆ ಎಂದು ರೈತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

2 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

2 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

3 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

4 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

4 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

4 hours ago