ಜಿಲ್ಲೆಗಳು

ಪ್ರೇಕ್ಷಕರ ಮನಗೆದ್ದ ಚಂದ್ರಹಾಸ, ಲೀಲಾವತಿ ನಾಟಕ ಪ್ರದರ್ಶನ

ಜಿಟಿಜಿಟಿ ಮಳೆ, ಚಳಿಯ ನಡುವೆ ಮಿರ್ಚಿ, ಮಂಡಕ್ಕಿ ತಿಂದು ನಾಟಕ ವೀಕ್ಷಣೆ

ಬಿ.ಎನ್.ಧನಂಜಯಗೌಡ

ಮೈಸೂರು: ಹೊರಗೆ ಜಿಟಿ ಜಿಟಿ ಮಳೆ, ಚಳಿಯ ನಡುವೆ ತಲೆಗೆ ಟೋಪಿ ಹಾಕಿ, ಬೆಚ್ಚಗೆ ಸ್ವೆಟರ್ ಧರಿಸಿ, ಮಿರ್ಚಿ, ಮಂಡಕ್ಕಿ, ಬಜ್ಜಿಯನ್ನು ತಿನ್ನುತ್ತಾ ನಾಟಕ ವೀಕ್ಷಣೆ ಮಾಡುವಲ್ಲಿ ಪ್ರೇಕ್ಷಕರು ನಿರತರಾಗಿದ್ದ ದೃಶ್ಯಗಳು ಭಾನುವಾರ ರಂಗಮಂದಿರಗಳಲ್ಲಿ ಕಂಡುಬಂದವು.  ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಭಾನುವಾರ ಪ್ರದರ್ಶನಗೊಂಡ ‘ಚಂದ್ರಹಾಸ’ ಮತ್ತು ‘ಲೀಲಾವತಿ’ ನಾಟಕಗಳು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದವು.

‘ಚಂದ್ರಹಾಸ’ ಅತ್ಯುತ್ತಮ ಸ್ಪಂದನೆ: ಮಂತ್ರಿಯೊಬ್ಬ ಮೌಢ್ಯದ ದಾಸ್ಯಕ್ಕೆ ಒಳಗಾಗಿ ಮತ್ತು ರಾಜಪುರೋಹಿತರು ಹೇಳುವ ಭವಿಷ್ಯವನ್ನು ನಂಬಿ, ಹೇಗೆ ತನ್ನ ಮಗನನ್ನೇ ಬಲಿಕೊಡುತ್ತಾನೆ ಎಂಬ ಸಾರವನ್ನು ಒಳಗೊಂಡ ಕುವೆಂಪು ರಚನೆಯ ಪ್ರಮೋದ್ ಶಿಗ್ಗಾಂವ್ ನಿರ್ದೇಶನದ ನಾಟಕ ‘ಚಂದ್ರಹಾಸ’ ನಾಟಕ ಸಂಪತ್ ರಂಗಮಂದಿರದಲ್ಲಿ ಸಾಣೇಹಳ್ಳಿ ಶಿವಕುಮಾರ ಕಲಾಸಂಘದ ತಂಡದಿಂದ ಪ್ರದರ್ಶನಗೊಂಡಿತು. ಈ ನಾಟಕಕ್ಕೆ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.


ಮನಗೆದ್ದ ಲೀಲಾವತಿ: ಭಾರತದ ಶ್ರೇಷ್ಠ ಗಣಿತಶಾಸ್ತ್ರಜ್ಞ ಭಾಸ್ಕರಾಚಾರ್ಯ ಅವರು ಬರೆದಿರುವ ‘ಲೀಲಾವತಿ’ ಗ್ರಂಥ ಸಿದ್ಧಾಂತವನ್ನು ಆಧರಿಸಿದ ಲೀಲಾವತಿ ನಾಟಕ ಭೂಮಿಗೀತ ವೇದಿಕೆಯಲ್ಲಿ ಪ್ರದರ್ಶನಗೊಂಡಿತು. ಶಶಿಧರ ಡೋಂಗ್ರೆ ಅವರ ರಚನೆಯ, ಪ್ರೊ.ಎಚ್.ಎಸ್.ಉಮೇಶ್ ನಿರ್ದೇಶಿಸಿರುವ ಕನ್ನಡದ ಈ ನಾಟಕವನ್ನು ಕಲಾಸುರುಚಿ ತಂಡ ಅದ್ಬುತವಾಗಿ ಪ್ರದರ್ಶಿಸಿತು. ಭೂಮಿಗೀತ ವೇದಿಕೆ ಶೇ.೮೦ರಷ್ಟು ಭರ್ತಿಯಾಗುವ ಮೂಲಕ ರಂಗಾಸ್ತಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು.

ನೀರಸ ಪ್ರತಿಕ್ರಿಯೆ: ಸಿಯಾಮ್ ಡೆತ್ ರೈಲ್ವೇ ನಿರ್ಮಾಣದಲ್ಲಿ ನಾಶವಾದ ಲಕ್ಷಾಂತರ ಆಗ್ನೇಯ ಏಷ್ಯಾದ ಮತ್ತು ಮಲೇಷಿಯಾದ ತಮಿಳು ನಿರಾಶ್ರಿತರ ಕಥೆಗಳನ್ನು ಆಧರಿಸಿದ ‘ಇಡಕಿಣಿ ಕಥಾಯರಥಂ’ ಎಂಬ ತಮಿಳು ನಾಟಕಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ೪೦೦ ಟಿಕೆಟ್‌ಗಳ ಪೈಕಿ ಕೇವಲ ೩೬ ಟಿಕೆಟ್‌ಗಳಷ್ಟೆ ಸೇಲ್ ಆಗಿದ್ದವು.

andolanait

Recent Posts

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 mins ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

58 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

1 hour ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

1 hour ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

1 hour ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago