ಜಿಲ್ಲೆಗಳು

ಪ್ರೇಕ್ಷಕರ ಮನಗೆದ್ದ ಚಂದ್ರಹಾಸ, ಲೀಲಾವತಿ ನಾಟಕ ಪ್ರದರ್ಶನ

ಜಿಟಿಜಿಟಿ ಮಳೆ, ಚಳಿಯ ನಡುವೆ ಮಿರ್ಚಿ, ಮಂಡಕ್ಕಿ ತಿಂದು ನಾಟಕ ವೀಕ್ಷಣೆ

ಬಿ.ಎನ್.ಧನಂಜಯಗೌಡ

ಮೈಸೂರು: ಹೊರಗೆ ಜಿಟಿ ಜಿಟಿ ಮಳೆ, ಚಳಿಯ ನಡುವೆ ತಲೆಗೆ ಟೋಪಿ ಹಾಕಿ, ಬೆಚ್ಚಗೆ ಸ್ವೆಟರ್ ಧರಿಸಿ, ಮಿರ್ಚಿ, ಮಂಡಕ್ಕಿ, ಬಜ್ಜಿಯನ್ನು ತಿನ್ನುತ್ತಾ ನಾಟಕ ವೀಕ್ಷಣೆ ಮಾಡುವಲ್ಲಿ ಪ್ರೇಕ್ಷಕರು ನಿರತರಾಗಿದ್ದ ದೃಶ್ಯಗಳು ಭಾನುವಾರ ರಂಗಮಂದಿರಗಳಲ್ಲಿ ಕಂಡುಬಂದವು.  ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಭಾನುವಾರ ಪ್ರದರ್ಶನಗೊಂಡ ‘ಚಂದ್ರಹಾಸ’ ಮತ್ತು ‘ಲೀಲಾವತಿ’ ನಾಟಕಗಳು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದವು.

‘ಚಂದ್ರಹಾಸ’ ಅತ್ಯುತ್ತಮ ಸ್ಪಂದನೆ: ಮಂತ್ರಿಯೊಬ್ಬ ಮೌಢ್ಯದ ದಾಸ್ಯಕ್ಕೆ ಒಳಗಾಗಿ ಮತ್ತು ರಾಜಪುರೋಹಿತರು ಹೇಳುವ ಭವಿಷ್ಯವನ್ನು ನಂಬಿ, ಹೇಗೆ ತನ್ನ ಮಗನನ್ನೇ ಬಲಿಕೊಡುತ್ತಾನೆ ಎಂಬ ಸಾರವನ್ನು ಒಳಗೊಂಡ ಕುವೆಂಪು ರಚನೆಯ ಪ್ರಮೋದ್ ಶಿಗ್ಗಾಂವ್ ನಿರ್ದೇಶನದ ನಾಟಕ ‘ಚಂದ್ರಹಾಸ’ ನಾಟಕ ಸಂಪತ್ ರಂಗಮಂದಿರದಲ್ಲಿ ಸಾಣೇಹಳ್ಳಿ ಶಿವಕುಮಾರ ಕಲಾಸಂಘದ ತಂಡದಿಂದ ಪ್ರದರ್ಶನಗೊಂಡಿತು. ಈ ನಾಟಕಕ್ಕೆ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.


ಮನಗೆದ್ದ ಲೀಲಾವತಿ: ಭಾರತದ ಶ್ರೇಷ್ಠ ಗಣಿತಶಾಸ್ತ್ರಜ್ಞ ಭಾಸ್ಕರಾಚಾರ್ಯ ಅವರು ಬರೆದಿರುವ ‘ಲೀಲಾವತಿ’ ಗ್ರಂಥ ಸಿದ್ಧಾಂತವನ್ನು ಆಧರಿಸಿದ ಲೀಲಾವತಿ ನಾಟಕ ಭೂಮಿಗೀತ ವೇದಿಕೆಯಲ್ಲಿ ಪ್ರದರ್ಶನಗೊಂಡಿತು. ಶಶಿಧರ ಡೋಂಗ್ರೆ ಅವರ ರಚನೆಯ, ಪ್ರೊ.ಎಚ್.ಎಸ್.ಉಮೇಶ್ ನಿರ್ದೇಶಿಸಿರುವ ಕನ್ನಡದ ಈ ನಾಟಕವನ್ನು ಕಲಾಸುರುಚಿ ತಂಡ ಅದ್ಬುತವಾಗಿ ಪ್ರದರ್ಶಿಸಿತು. ಭೂಮಿಗೀತ ವೇದಿಕೆ ಶೇ.೮೦ರಷ್ಟು ಭರ್ತಿಯಾಗುವ ಮೂಲಕ ರಂಗಾಸ್ತಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು.

ನೀರಸ ಪ್ರತಿಕ್ರಿಯೆ: ಸಿಯಾಮ್ ಡೆತ್ ರೈಲ್ವೇ ನಿರ್ಮಾಣದಲ್ಲಿ ನಾಶವಾದ ಲಕ್ಷಾಂತರ ಆಗ್ನೇಯ ಏಷ್ಯಾದ ಮತ್ತು ಮಲೇಷಿಯಾದ ತಮಿಳು ನಿರಾಶ್ರಿತರ ಕಥೆಗಳನ್ನು ಆಧರಿಸಿದ ‘ಇಡಕಿಣಿ ಕಥಾಯರಥಂ’ ಎಂಬ ತಮಿಳು ನಾಟಕಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ೪೦೦ ಟಿಕೆಟ್‌ಗಳ ಪೈಕಿ ಕೇವಲ ೩೬ ಟಿಕೆಟ್‌ಗಳಷ್ಟೆ ಸೇಲ್ ಆಗಿದ್ದವು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

12 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

13 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

13 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

13 hours ago