ಜಿಲ್ಲೆಗಳು

ಅರಮನೆ ಅಂಗಳದಲ್ಲಿ ಆಯುಧಪೂಜೆಯ ಸಂಭ್ರಮ

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆನೆಗಳಿಗೆ ಚಿತ್ತಾರ

ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್​ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ  ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.

ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.

 

andolana

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

3 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

3 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

4 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

4 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

5 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

5 hours ago