ಜಿಲ್ಲೆಗಳು

ಅರಮನೆ ಅಂಗಳದಲ್ಲಿ ಆಯುಧಪೂಜೆಯ ಸಂಭ್ರಮ

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆನೆಗಳಿಗೆ ಚಿತ್ತಾರ

ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್​ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ  ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.

ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.

 

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

2 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

2 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

2 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago