ಜಿಲ್ಲೆಗಳು

ಅರಮನೆ ಅಂಗಳದಲ್ಲಿ ಆಯುಧಪೂಜೆಯ ಸಂಭ್ರಮ

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆನೆಗಳಿಗೆ ಚಿತ್ತಾರ

ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್​ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ  ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.

ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.

 

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

6 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

15 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago