ಮೈಸೂರು: ಆರ್ಯುದೇವದಕ್ಕೆ ತನ್ನದೆ ಆದ ವಿಶೇಷ ಶಕ್ತಿ ಇದೆ. ಪುರಾತನ ಕಾಲದಲ್ಲಿ ಆರ್ಯುವೇದ ಬಳಸಿಕೊಂಡು ಚಿಕಿತ್ಸೆ ಪಡೆದು ಸಾಧ್ಯ ಇಲ್ಲ ಎಂಬುದನ್ನು ಸಾಧಿಸಿರುವ ಕೀರ್ತಿ ಆಯುರ್ವೇದಕ್ಕೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ ಏರ್ಪಡಿಸಿದ್ದ “ಆಯುಷ್ ಸೇವಾ ಗ್ರಾಮ ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಯುರ್ವೇದವು ಭಾರತದ ವೈದ್ಯ ಪದ್ದತಿಯಾಗಿದ್ದು, ಇಂದು ವಿಶ್ವಮನ್ನಣೆಯನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.
ಆರ್ಯುವೇದವು ನಮ್ಮ ದೇಹದ ಪಂಚೇಂದ್ರಿಯಗಳನ್ನು ನಿಯಂತ್ರಿಸುತ್ತದೆ. ಆರ್ಯುವೇದವನ್ನು ನಾವು ಚಿಕಿತ್ಸೆಗಿಂತ ಮುಖ್ಯವಾಗಿ ಬದುಕಿನ ಭಾಗ ಎಂಬುದಾಗಿ ಪರಿಗಣಿಸಬೇಕಾಗಿದೆ.
ಮುಂದಿನ ಪೀಳಿಗೆಗೆ ಈ ಪದ್ದತಿಯನ್ನು ತಲುಪಿಸುವ ಕಾರ್ಯ ಮಾಡಬೇಕು. ಆರ್ಯುವೇದ ಪದ್ದತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದರ ನಿಯಮಗಳನ್ನು ಬದುಕಿನಲ್ಲಿ ಪಾಲಿಸಬೇಕು. ಇದರಿಂದ ಆತ್ಮಸ್ತೈರ್ಯ ವೃದ್ಧಿಯಾಗಿ ಗುಣಾತ್ಮಕ ಯೋಚನೆ ಮೂಡುತ್ತದೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…