ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ.
ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊರಹೋಗಿದ್ದ ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಸಮೀಪದ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದರೂ, ಅಷ್ಟರ ವೇಳೆಗೆ ಪ್ರಾಣ ಹೋಗಿತ್ತು.
ಗಿರಿಜಾಲಕ್ಷ್ಮಿ ನಗರದ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಗಿರಿಜಾ ಮೃತದೇಹ ಕೆ.ಆರ್.ಆಸ್ಪತ್ರೆಯಲ್ಲಿ ಇದ್ದು, ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತು ನಜರ್ ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐದು ದಿನಗಳ ಹಿಂದಷ್ಟೇ ಗೋಪಿನಾಥ್ ಅವರ ಅಣ್ಣ ವಿಧಿವಶರಾಗಿದ್ದರು. ಇದೀಗ ಈ ದುರಂತ ನಡೆದಿದೆ. ಆ ಕುಟುಂಬಕ್ಕೆ ಮೇಲಿಂದ ಮೇಲೆ ಅಘಾತವಾಗಿದೆ.
ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್ ಮತ್ತು…
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…
ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…