ಜಿಲ್ಲೆಗಳು

ಬಿ.ರಾಚಯ್ಯ ಜೋಡಿ ರಸ್ತೆ ಹೆಸರು ಬಳಕೆಗೆ ಹಿಂದೇಟು

ನಗರಸಭೆಯ ದ್ವಂದ್ವಾತ್ಮಕ ನಿಲುವು; ಮಾಜಿ ರಾಜ್ಯಪಾಲರ ಹೆಸರಿನ ಹೆಬ್ಬಾಗಿಲು ನಿರ್ಮಾಣ ಎಂದು?

ಎ.ಎಸ್.ಮಣಿಕಂಠ
ಚಾಮರಾಜನಗರ: ಈ ನಾಡು ಕಂಡ ಧೀಮಂತ ರಾಜಕಾರಣಿ ಬಿ.ರಾಚಯ್ಯ ಅವರ ಹೆಸರಿನ ಜೋಡಿ ರಸ್ತೆಯಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಹೆಸರು ಬಳಸಲು ಹಲವಾರು ಮಳಿಗೆಗಳು ಹಿಂದೇಟು ಹಾಕುತ್ತಿದ್ದು, ನಗರಸಭೆಯ ದ್ವಂದ್ವ ನೀತಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜೋಡಿ ರಸ್ತೆ

ನಗರದ ಪಚ್ಚಪ್ಪ ವೃತ್ತದಿಂದ ಪ್ರಾರಂಭವಾಗಿ ರಾಮಸಮುದ್ರ ಗ್ರಾಮಾಂತರ ಪೊಲೀಸ್ ಠಾಣೆಯವರೆಗೆ ಇರುವ ಜೋಡಿ ರಸ್ತೆಗೆ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಘೋಷಿಸಲಾಗಿದ್ದು, ಇಂದಿಗೂ ರಸ್ತೆಯ ಎರಡೂ ಬದಿಗಳಲ್ಲಿರುವ ಸಾಕಷ್ಟು ಮಳಿಗೆಗಳು ನಾಮಫಲಕದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಬರೆದರೆ, ಕೆಲವು ಮಳಿಗೆಗಳು ನಗರಸಭೆಯ ದ್ವಂದ್ವ ನಿಲುವಿನಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂದು ನಾಮ ಫಲಕದಲ್ಲಿ ಹೆಸರು ಹಾಕಲು ಹಿಂದೇಟು ಹಾಕುತ್ತಿವೆ.
ಚಾ.ನಗರ ಜಿಲ್ಲೆಗೆ ತನ್ನದೇ ಆದ ಕೊಡುಗೆ ನೀಡಿ, ಇಂದಿಗೂ ಈ ಭಾಗದ ಜನರಿಗೆ ಆದರ್ಶ ರಾಜಕಾರಣಿ ಎನಿಸಿಕೊಂಡಿರುವ ದಲಿತ ನಾಯಕ, ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ನೆನಪಿಗಾಗಿ ನಗರದಲ್ಲಿನ ಜೋಡಿ ರಸ್ತೆಗೆ ಹೆಸರಿಟ್ಟು, ಅವರ ಹೆಸರಿನಲ್ಲಿ ಹೆಬ್ಬಾಗಿಲು ನಿರ್ಮಿಸಿ, ಪ್ರತಿಮೆ ಸ್ಥಾಪಿಸುವ ಕ್ರಮ ಕೈಗೊಂಡಿದ್ದರು. ಆದರೆ ಇಂದಿಗೂ ಅದು ನೇಪಥ್ಯಕ್ಕೆ ಸರಿದಿರುವುದಕ್ಕೆ ಬಿ.ರಾಚಯ್ಯ ಅವರ ಹಲವಾರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರಸಭೆಯ ದ್ವಂದ್ವ ನಿಲುವು: ನಗರಸಭೆಯಿಂದಲೇ ಈ ಮೊದಲು ಬಿ.ರಾಚಯ್ಯ ಜೋಡಿ ರಸ್ತೆ ಎಂಬ ಹೆಬ್ಬಾಗಿಲನ್ನು ನಿರ್ಮಾಣ ಮಾಡಿ ಅವರ ಹೆಸರಿನ ರಸ್ತೆ ಎಂದು ನಾಮಕರಣ ಮಾಡಿದ್ದರು. ನಗರಸಭೆ ನೀಡುವ ಉದ್ದಿಮೆ ಪರವಾನಗಿ ಪತ್ರದಲ್ಲಿ ಇನ್ನೂ ಬಿ.ಆರ್.ಹಿಲ್ಸ್ ರಸ್ತೆ ಎಂದು ನಮೂದಿಸಲಾಗಿದೆ. ಮಾಜಿ ರಾಜ್ಯಪಾಲ, ದಲಿತ ನಾಯಕರಾದ ಬಿ.ರಾಚಯ್ಯ ಅವರ ಕುರಿತು ನಗರಸಭೆ ದ್ವಂದ್ವ ನಿಲುವು ಹೊಂದಿರುವುದು ಎಷ್ಟು ಸರಿ? ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಹೆಬ್ಬಾಗಿಲು ನಿರ್ಮಾಣವೆಂದು?: ಈ ಮೊದಲು ಭುವನೇಶ್ವರಿ ವೃತ್ತದ ಬಳಿ ಇದ್ದ ಬಿ.ರಾಚಯ್ಯ ಜೋಡಿ ರಸ್ತೆ ಹೆಬ್ಬಾಗಿಲನ್ನು ಸಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ತೆರವುಗೊಳಿಸಿದ್ದು, ಈವರೆಗೂ ಅದನ್ನು ಮರು ಸ್ಥಾಪಿಸಲು ನಗರಸಭೆ ಮುಂದಾಗಿಲ್ಲ. ಭುವನೇಶ್ವರಿ ವೃತ್ತದ ಬಳಿ ಒಂದು ಚಿಕ್ಕ ಬೋರ್ಡ್ ಅಳವಡಿಸಿ ಕೈತೊಳೆದುಕೊಂಡಿದ್ದು, ನಗರಸಭೆ ದಲಿತ ನಾಯಕರಿಗೆ ಮಾಡಿರುವ ಅಪಮಾನ ಎಂದು ಸಾರ್ವಜನಿಕರಾದ ನವೀನ್ ಬೇಸರ ವ್ಯಕ್ತಪಡಿಸಿದ್ದಾರೆ.


ಬಿ.ರಾಚಯ್ಯ ಅವರ ಮೇಲೆ ನಮಗೆ ಅಪಾರ ಗೌರವವಿದೆ. ನಗರೋತ್ಥಾನ ೋಂಜನೆಯಡಿ ಅವರ ಹೆಸರಿನ ಹೆಬ್ಬಾಗಿಲು ಹಾಗೂ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸುತ್ತೇವೆ. ಬಿ.ರಾಚಯ್ಯ ಜೋಡಿ ರಸ್ತೆ ಎಂದು ನಮೂದಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು.
-ಆಶಾ ನಟರಾಜ್, ಅಧ್ಯಕ್ಷರು, ನಗರಸಭೆ..


ಉದ್ಯಮೆ ಪರವಾನಗಿಯಲ್ಲಿ ಬಿ.ಆರ್.ಹಿಲ್ಸ್ ಜೋಡಿ ರಸ್ತೆ ಎಂದು ಬರೆಯುವ ಮೂಲಕ ನಗರಸಭೆ ಬಿ.ರಾಚಯ್ಯ ಅವರಿಗೆ ಅಪಮಾನವೆಸಗಿದೆ. ಈ ಕೂಡಲೇ ಅದನ್ನು ಸರಿಪಡಿಸಿ ಅವರ ಹೆಸರಿನ ಹೆಬ್ಬಾಗಿಲು ಹಾಗೂ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಬೇಕು.
-ನವೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಅಂಬೇಡ್ಕರ್ ಸೇನೆ.


ಪರವಾನಗಿ ಪಡೆದುಕೊಳ್ಳುವ ಅರ್ಜಿದಾರರು ಕೆಲವೊಂದು ಬಾರಿ ಬಿ.ಆರ್.ಹಿಲ್ಸ್ ರಸ್ತೆ ಎಂದು ನೀಡಿರುತ್ತಾರೆ. ಈ ಕುರಿತು ಕ್ರಮ ವಹಿಸಲಾಗುವುದು.
-ನಟರಾಜ್, ಪ್ರಭಾರ ಆಯುಕ್ತರು, ನಗರಸಭೆ.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

3 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

4 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

6 hours ago