ಗುಂಡ್ಲುಪೇಟೆ : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್ ಹಾಕುವ ಮೂಲಕ ಹರಿದು ಹಾಕಲಾಗಿತ್ತು.
ಈ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಬಿಜೆಪಿ ಜಿಲ್ಲಾ ಯೂವ ಮೋರ್ಚಾಅಧ್ಯಕ್ಷ ಪ್ರಣಯ್ ಅವರು ಕುಮ್ಮಕ್ಕು ನೀಡುತಲಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಪ್ರಣಯ್ ಅವರ ಮೇಲೆ ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…