ಜಿಲ್ಲೆಗಳು

ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದು ಪಕ್ಷಕ್ಕೆ ಬಿಟ್ಟ ವಿಚಾರ : ಪ್ರಣಯ್‌

ಗುಂಡ್ಲುಪೇಟೆ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ  ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್​ ಹಾಕುವ ಮೂಲಕ ಹರಿದು ಹಾಕಲಾಗಿತ್ತು.
ಈ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಬಿಜೆಪಿ ಜಿಲ್ಲಾ ಯೂವ ಮೋರ್ಚಾಅಧ್ಯಕ್ಷ ಪ್ರಣಯ್‌ ಅವರು ಕುಮ್ಮಕ್ಕು ನೀಡುತಲಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಪ್ರಣಯ್‌ ಅವರ ಮೇಲೆ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ  ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್‌ ಅವರು ಫ್ಲೆಕ್ಸ್​ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ  ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್​ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

7 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

9 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago