ಜಿಲ್ಲೆಗಳು

ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದು ಪಕ್ಷಕ್ಕೆ ಬಿಟ್ಟ ವಿಚಾರ : ಪ್ರಣಯ್‌

ಗುಂಡ್ಲುಪೇಟೆ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ  ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್​ ಹಾಕುವ ಮೂಲಕ ಹರಿದು ಹಾಕಲಾಗಿತ್ತು.
ಈ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಬಿಜೆಪಿ ಜಿಲ್ಲಾ ಯೂವ ಮೋರ್ಚಾಅಧ್ಯಕ್ಷ ಪ್ರಣಯ್‌ ಅವರು ಕುಮ್ಮಕ್ಕು ನೀಡುತಲಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಪ್ರಣಯ್‌ ಅವರ ಮೇಲೆ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ  ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್‌ ಅವರು ಫ್ಲೆಕ್ಸ್​ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ  ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್​ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

9 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

15 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

15 hours ago