ಜಿಲ್ಲೆಗಳು

ಬಗರ್ ಹುಕುಂ ಭೂಮಿ ಸಕ್ರಮಕ್ಕೆ ಗಡಿ

ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ

ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಯ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, ೧೯೬೪ರ ಕಲಂ ೯೪ಎ, ೯೪ಬಿ ಹಾಗೂ ೯೪ಎ(೪)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.
ಅದರಂತೆ, ರಚಿತವಾದ ಸಮಿತಿಗಳು ಕಲಂ ೯೪ಎ(೪)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.

ಎಲ್ಲಿ ಎಷ್ಟು ವ್ಯಾಪ್ತಿ?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ ೧೮ ಕಿ.ಮೀ.
* ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ನಗರ ಪಾಲಿಕೆಗಳ ೧೦ ಕಿ.ಮೀ.
* ಎಲ್ಲಾ ನಗರ ಪೌರಸಭೆಗಳು ೫ ಕಿ.ಮೀ.
* ಎಲ್ಲಾ ಪೌರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು ೩ ಕಿ.ಮೀ.

ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯಿತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೬೬ರ ನಿಯಮ ೧೦೮(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಬೇಕು.
-ಎನ್.ಜಯರಾಮ್, ಕಂದಾಯ ಇಲಾಖೆಯ ಕಾರ್ಯದರ್ಶಿ

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

49 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago