ಜಿಲ್ಲೆಗಳು

ಬಗರ್ ಹುಕುಂ ಭೂಮಿ ಸಕ್ರಮಕ್ಕೆ ಗಡಿ

ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ

ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಯ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, ೧೯೬೪ರ ಕಲಂ ೯೪ಎ, ೯೪ಬಿ ಹಾಗೂ ೯೪ಎ(೪)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.
ಅದರಂತೆ, ರಚಿತವಾದ ಸಮಿತಿಗಳು ಕಲಂ ೯೪ಎ(೪)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.

ಎಲ್ಲಿ ಎಷ್ಟು ವ್ಯಾಪ್ತಿ?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ ೧೮ ಕಿ.ಮೀ.
* ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ನಗರ ಪಾಲಿಕೆಗಳ ೧೦ ಕಿ.ಮೀ.
* ಎಲ್ಲಾ ನಗರ ಪೌರಸಭೆಗಳು ೫ ಕಿ.ಮೀ.
* ಎಲ್ಲಾ ಪೌರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು ೩ ಕಿ.ಮೀ.

ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯಿತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೬೬ರ ನಿಯಮ ೧೦೮(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಬೇಕು.
-ಎನ್.ಜಯರಾಮ್, ಕಂದಾಯ ಇಲಾಖೆಯ ಕಾರ್ಯದರ್ಶಿ

andolanait

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

4 hours ago