ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ
ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಯ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, ೧೯೬೪ರ ಕಲಂ ೯೪ಎ, ೯೪ಬಿ ಹಾಗೂ ೯೪ಎ(೪)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.
ಅದರಂತೆ, ರಚಿತವಾದ ಸಮಿತಿಗಳು ಕಲಂ ೯೪ಎ(೪)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.
ಎಲ್ಲಿ ಎಷ್ಟು ವ್ಯಾಪ್ತಿ?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ ೧೮ ಕಿ.ಮೀ.
* ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ನಗರ ಪಾಲಿಕೆಗಳ ೧೦ ಕಿ.ಮೀ.
* ಎಲ್ಲಾ ನಗರ ಪೌರಸಭೆಗಳು ೫ ಕಿ.ಮೀ.
* ಎಲ್ಲಾ ಪೌರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು ೩ ಕಿ.ಮೀ.
ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯಿತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೬೬ರ ನಿಯಮ ೧೦೮(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಬೇಕು.
-ಎನ್.ಜಯರಾಮ್, ಕಂದಾಯ ಇಲಾಖೆಯ ಕಾರ್ಯದರ್ಶಿ
ರಮೇಶ್ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…
ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…