ಜಿಲ್ಲೆಗಳು

ಬಗರ್ ಹುಕುಂ ಭೂಮಿ ಸಕ್ರಮಕ್ಕೆ ಗಡಿ

ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ

ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಯ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, ೧೯೬೪ರ ಕಲಂ ೯೪ಎ, ೯೪ಬಿ ಹಾಗೂ ೯೪ಎ(೪)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.
ಅದರಂತೆ, ರಚಿತವಾದ ಸಮಿತಿಗಳು ಕಲಂ ೯೪ಎ(೪)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.

ಎಲ್ಲಿ ಎಷ್ಟು ವ್ಯಾಪ್ತಿ?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ ೧೮ ಕಿ.ಮೀ.
* ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ನಗರ ಪಾಲಿಕೆಗಳ ೧೦ ಕಿ.ಮೀ.
* ಎಲ್ಲಾ ನಗರ ಪೌರಸಭೆಗಳು ೫ ಕಿ.ಮೀ.
* ಎಲ್ಲಾ ಪೌರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು ೩ ಕಿ.ಮೀ.

ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯಿತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೬೬ರ ನಿಯಮ ೧೦೮(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಬೇಕು.
-ಎನ್.ಜಯರಾಮ್, ಕಂದಾಯ ಇಲಾಖೆಯ ಕಾರ್ಯದರ್ಶಿ

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 hour ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago