ಜಿಲ್ಲೆಗಳು

ಸ್ವಾತಂತ್ರ್ಯ ಕಿಚ್ಚು ಹಚ್ಚಿದ ಭಗತ್‌ಸಿಂಗ್‌ ಇಂದಿಗೂ ಸ್ಪೂರ್ತಿದಾಯಕ : ಕವೀಶ್ ಗೌಡ

ಮೈಸೂರು : ನಾಡು ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ 115 ನೇ ಜಯಂತಿಯ ಅಂಗವಾಗಿ ಸಮಾನಮನಸ್ಕ ಬಳಗದ ವತಿಯಿಂದ ನಗರದ ಗಾಂಧಿವೃತ್ತದಲ್ಲಿ ಭಗತ್ ಸಿಂಗ್ ಒಂದು ನೆನಪು ಕಾರ್ಯಕ್ರಮ ಆಯೋಜಿಸಲಾಗಿತ್ತು,

ಭಗತ್‌ ಸಿಂಗ್‌ ಅರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿದ್ಯಾವಿಕಾಸ ಸಂಸ್ಥೆಯ ಕವೀಶ್ ಗೌಡ ರವರು ಮಾತನಾಡಿ ಸಿಂಗ್ ರವರ ಹೆಸರು ಪ್ರತಿಯೊಬ್ಬ ದೇಶಭಕ್ತನ ಮನದಲ್ಲಿ ಸದಾ ಕಾಲ ಉಳಿಯುವಂತದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್‌‌ ಸಿಂಗ್‌‌ ರವರ ಹೆಸರನ್ನು ನಾಮಕರಣ ಮಾಡಿರುವುದು ನಮ್ಮೆರಿಗೂ ಸಂತವನ್ನುಂಟು ಮಾಡಿದೆ ಎಂದರು.

ಬಳಿಕ ಮಾತನಾಡಿದ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಪಡುವಾರಹಳ್ಳಿಯ ಎಂ ರಾಮಕೃಷ್ಣ ರವರು 23 ವರ್ಷದ ಕ್ರಾಂತಿಕಾರಿ ಯುವ ಶಕ್ತಿ ಭಗತ್ ಸಿಂಗ್ ರವರು ಇನ್ ಕಿಲಾಬ್ ಜಿಂದಾಬಾದ್ ಘೋಷಣೆ ಮೂಲಕ ದೇಶಾದ್ಯಂತ ಬ್ರಿಟಿಶರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದ ಅಪ್ರತಿಮ ದೇಶಭಕ್ತ 1924 ರಲ್ಲಿ ಅಸೆಂಬ್ಲಿ ನಡೆಯುತ್ತಿದ್ದಾಗ ಭಗತ್‌‌ ಸಿಂಗ್‌‌ ಬಿ.ಕೆ ದತ್ ರವರು ಬಾಂಬ್ ಎಸೆದು ಇನ್ ಕಿಲಾಬ್ ಜಿಂದಾಬಾದ್ ಬ್ರಿಟಿಷ್ ಸಾಮ್ರಾಜ್ಯ ಶಾಹಿಗೆ ದಿಕ್ಕಾರ ಎಂದು ಕ್ರಾಂತಿಕಾರಿ ಘೋಷಣೆ ಕೂಗಿ ಭರತಖಂಡದಲ್ಲಿ ಯುವಕರನ್ನು ಬ್ರಿಟಿಷರ ವಿರುದ್ಧ ಹೋರಾಡಲು ಸಜ್ಜುಗೊಳಿಸಿದರು. ದೇಶಕ್ಕಾಗಿ ಹೋರಾಡಲು ಕರೆನೀಡಿ ವೈಯಕ್ತಿಕ ಜೀವನ ತೊರೆಯಲು ಕರೆ ನೀಡಿದರು, ಇದು ದೇಶಾದ್ಯಂತ ಸ್ವಾತಂತ್ರ್ಯ ಕಿಚ್ಚು ಹಚ್ಚಿದ ಅವರ ಜೀವನದ ಸ್ವಾತಂತ್ರ್ಯ ಕಿಚ್ಚು ನಮಗೆಲ್ಲ ಇಂದಿಗೂ ಸ್ಪೂರ್ತಿದಾಯಕ ಅವರ ಜಯಂತಿಯನ್ನು ಮೈಸೂರಿನಲ್ಲಿ ಆಚರಣೆ ಮಾಡಿ ಗೌರವಿಸುತ್ತಿದ್ದೇವೆ ಎಂದರು,

ನಂತರ ಯುವ ಮುಖಂಡ ಅಜಯ್ ಶಾಸ್ತ್ರಿ ಮಾತನಾಡಿ ಜಿಲಿಯಾನ್ ವಾಲಾಬಾಗ್‌ ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಭಾರತೀಯರು ನೂರಾರು ಸಂಖ್ಯೆಯಲ್ಲಿ ಮಡಿದರು, ಅಲ್ಲಿದ 12ವರ್ಷದ ಬಾಲಕ ಭಾರತೀಯರ ರಕ್ತವನ್ನ ಬಾಟಲಿನಲ್ಲಿ ತುಂಬಿ ಬ್ರೀಟೀಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಶಪಥ ಮಾಡಿದ ಬಾಲಕನೇ ಅಪ್ರತಿಮ ಹೋರಾಟಗಾರ ಭಗತ್ ಸಿಂಗ್, ಅವರ ಚಿಕ್ಕಪ್ಪ ಅಜಿತ್ ಸಿಂಗ್ ರವರಿಂದ ಪ್ರೇರೆಪಿತರಾಗಿ ಸ್ವಾತಂತ್ರ್ಯ ಹೋರಾಟದ ಆಂದೋಲನ ಕೈಗೊಂಡು ಲಕ್ಷಾಂತರ ಯುವಕರನ್ನ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್ ಸಂಘಟಿಸಿದರು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭಗತ್ ಸಿಂಗ್ ರವರ ಅಧ್ಯಯನ ಪೀಠ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಅರಿವು, ಮತ್ತು ದೇಶಪ್ರೇಮ ಜಾಗೃತಿ ಮೂಡಿಸಬೇಕಿದೆ ಎಂದರು,

ಕಾರ್ಯಕ್ರಮದಲ್ಲಿ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅದ್ಯಕ್ಷರಾದ ಕೆ ಉಮಾಶಂಕರ್, ನಿರ್ದೇಶಕ ಎಸ್.ಅರವಿಂದ್,ಚಾಮರಾಜ ಬಿಜೆಪಿ ಅದ್ಯಕ್ಷರಾದ ಸೋಮಶೇಖರ್ ರಾಜು, ನಗರಪಾಲಿಕೆ ಸದಸ್ಯರಾದ ಎಂ. ಚಿಕ್ಕವೆಂಕಟು,
ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಎಸ್.ಕೃಷ್ಣಕುಮರ್,ಬಿ.ಕುಮಾರ್, ಸಿ.ಸಂತೋಷ್, ಯುವ ಮುಖಂಡರಾದ ಅಜಯ್ ಶಾಸ್ತಿ,ವಿಕ್ರಂ ಅಯ್ಯಂಗಾರ್, ಕೇಬಲ್ ಕಿಟ್ಟಿ, ಸುರೇಂದ್ರ, ಅನುಜ್,ಛಲಪತಿ, ರವಿ ,ವೀರನಗೆರೆಯ ನಕ್ಷತ್ರ ಗ್ರೂಪ್ ವಿಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago