ಮೈಸೂರು : ನಾಡು ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 115 ನೇ ಜಯಂತಿಯ ಅಂಗವಾಗಿ ಸಮಾನಮನಸ್ಕ ಬಳಗದ ವತಿಯಿಂದ ನಗರದ ಗಾಂಧಿವೃತ್ತದಲ್ಲಿ ಭಗತ್ ಸಿಂಗ್ ಒಂದು ನೆನಪು ಕಾರ್ಯಕ್ರಮ ಆಯೋಜಿಸಲಾಗಿತ್ತು,
ಭಗತ್ ಸಿಂಗ್ ಅರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿದ್ಯಾವಿಕಾಸ ಸಂಸ್ಥೆಯ ಕವೀಶ್ ಗೌಡ ರವರು ಮಾತನಾಡಿ ಸಿಂಗ್ ರವರ ಹೆಸರು ಪ್ರತಿಯೊಬ್ಬ ದೇಶಭಕ್ತನ ಮನದಲ್ಲಿ ಸದಾ ಕಾಲ ಉಳಿಯುವಂತದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ರವರ ಹೆಸರನ್ನು ನಾಮಕರಣ ಮಾಡಿರುವುದು ನಮ್ಮೆರಿಗೂ ಸಂತವನ್ನುಂಟು ಮಾಡಿದೆ ಎಂದರು.
ಬಳಿಕ ಮಾತನಾಡಿದ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಪಡುವಾರಹಳ್ಳಿಯ ಎಂ ರಾಮಕೃಷ್ಣ ರವರು 23 ವರ್ಷದ ಕ್ರಾಂತಿಕಾರಿ ಯುವ ಶಕ್ತಿ ಭಗತ್ ಸಿಂಗ್ ರವರು ಇನ್ ಕಿಲಾಬ್ ಜಿಂದಾಬಾದ್ ಘೋಷಣೆ ಮೂಲಕ ದೇಶಾದ್ಯಂತ ಬ್ರಿಟಿಶರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದ ಅಪ್ರತಿಮ ದೇಶಭಕ್ತ 1924 ರಲ್ಲಿ ಅಸೆಂಬ್ಲಿ ನಡೆಯುತ್ತಿದ್ದಾಗ ಭಗತ್ ಸಿಂಗ್ ಬಿ.ಕೆ ದತ್ ರವರು ಬಾಂಬ್ ಎಸೆದು ಇನ್ ಕಿಲಾಬ್ ಜಿಂದಾಬಾದ್ ಬ್ರಿಟಿಷ್ ಸಾಮ್ರಾಜ್ಯ ಶಾಹಿಗೆ ದಿಕ್ಕಾರ ಎಂದು ಕ್ರಾಂತಿಕಾರಿ ಘೋಷಣೆ ಕೂಗಿ ಭರತಖಂಡದಲ್ಲಿ ಯುವಕರನ್ನು ಬ್ರಿಟಿಷರ ವಿರುದ್ಧ ಹೋರಾಡಲು ಸಜ್ಜುಗೊಳಿಸಿದರು. ದೇಶಕ್ಕಾಗಿ ಹೋರಾಡಲು ಕರೆನೀಡಿ ವೈಯಕ್ತಿಕ ಜೀವನ ತೊರೆಯಲು ಕರೆ ನೀಡಿದರು, ಇದು ದೇಶಾದ್ಯಂತ ಸ್ವಾತಂತ್ರ್ಯ ಕಿಚ್ಚು ಹಚ್ಚಿದ ಅವರ ಜೀವನದ ಸ್ವಾತಂತ್ರ್ಯ ಕಿಚ್ಚು ನಮಗೆಲ್ಲ ಇಂದಿಗೂ ಸ್ಪೂರ್ತಿದಾಯಕ ಅವರ ಜಯಂತಿಯನ್ನು ಮೈಸೂರಿನಲ್ಲಿ ಆಚರಣೆ ಮಾಡಿ ಗೌರವಿಸುತ್ತಿದ್ದೇವೆ ಎಂದರು,
ನಂತರ ಯುವ ಮುಖಂಡ ಅಜಯ್ ಶಾಸ್ತ್ರಿ ಮಾತನಾಡಿ ಜಿಲಿಯಾನ್ ವಾಲಾಬಾಗ್ ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಭಾರತೀಯರು ನೂರಾರು ಸಂಖ್ಯೆಯಲ್ಲಿ ಮಡಿದರು, ಅಲ್ಲಿದ 12ವರ್ಷದ ಬಾಲಕ ಭಾರತೀಯರ ರಕ್ತವನ್ನ ಬಾಟಲಿನಲ್ಲಿ ತುಂಬಿ ಬ್ರೀಟೀಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಶಪಥ ಮಾಡಿದ ಬಾಲಕನೇ ಅಪ್ರತಿಮ ಹೋರಾಟಗಾರ ಭಗತ್ ಸಿಂಗ್, ಅವರ ಚಿಕ್ಕಪ್ಪ ಅಜಿತ್ ಸಿಂಗ್ ರವರಿಂದ ಪ್ರೇರೆಪಿತರಾಗಿ ಸ್ವಾತಂತ್ರ್ಯ ಹೋರಾಟದ ಆಂದೋಲನ ಕೈಗೊಂಡು ಲಕ್ಷಾಂತರ ಯುವಕರನ್ನ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್ ಸಂಘಟಿಸಿದರು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭಗತ್ ಸಿಂಗ್ ರವರ ಅಧ್ಯಯನ ಪೀಠ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಅರಿವು, ಮತ್ತು ದೇಶಪ್ರೇಮ ಜಾಗೃತಿ ಮೂಡಿಸಬೇಕಿದೆ ಎಂದರು,
ಕಾರ್ಯಕ್ರಮದಲ್ಲಿ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅದ್ಯಕ್ಷರಾದ ಕೆ ಉಮಾಶಂಕರ್, ನಿರ್ದೇಶಕ ಎಸ್.ಅರವಿಂದ್,ಚಾಮರಾಜ ಬಿಜೆಪಿ ಅದ್ಯಕ್ಷರಾದ ಸೋಮಶೇಖರ್ ರಾಜು, ನಗರಪಾಲಿಕೆ ಸದಸ್ಯರಾದ ಎಂ. ಚಿಕ್ಕವೆಂಕಟು,
ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಎಸ್.ಕೃಷ್ಣಕುಮರ್,ಬಿ.ಕುಮಾರ್, ಸಿ.ಸಂತೋಷ್, ಯುವ ಮುಖಂಡರಾದ ಅಜಯ್ ಶಾಸ್ತಿ,ವಿಕ್ರಂ ಅಯ್ಯಂಗಾರ್, ಕೇಬಲ್ ಕಿಟ್ಟಿ, ಸುರೇಂದ್ರ, ಅನುಜ್,ಛಲಪತಿ, ರವಿ ,ವೀರನಗೆರೆಯ ನಕ್ಷತ್ರ ಗ್ರೂಪ್ ವಿಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…