ಶಿವಮೊಗ್ಗ : ಹಿರಿಯ ಸಾಹಿತಿ ಭಗವಾನ್ ಅವರನ್ನು ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಕೋರ್ಟಿಗೆ ಹಾಜರುಪಡಿಸಬೇಕೆಂದು ಮೈಸೂರು ಎಸ್ಪಿಗೆ ಸಾಗರ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಭಗವಾನ್ ಅವರು ಬರೆದಿರುವ ರಾಮ ಮಂದಿರ ಏಕೆ ಬೇಡ ಎಂಬ ಕೃತಿಗೆ ಸಂಬಂಧಪಟ್ಟಂತೆ ಕೃತಿಯ ವಿರುದ್ಧವಾಗಿ ಸಾಗರ ತಾಲೂಕಿನ ಇಕ್ಕೇರಿಯ ಸಂಘ ಪರಿವಾರದ ಮಹಾಬಲೇಶ್ವರ್ ಎಂಬುವರು ನೀಡಿರುವ ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕುರಿತು ಪೊಲೀಸರ ವಿರುದ್ಧ ಸಾಗರದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಗರದ ಜೆಎಂಎಫ್ಸಿ ನ್ಯಾಯಾಲಯ ಸಾಹಿತಿ ಭಗವಾನ್ ರನ್ನು ಕೋರ್ಟಿಗೆ ಹಾಜರುಪಡಿಸಬೇಕೆಂದು ಎಸ್ ಪಿ ಗೆ ನೋಟಿಸ್ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗಾಗಿ ಸಾಗರ ಕೋರ್ಟ್ 30- 8 -2022 ರಂದು ಭಗವಾನ್ ರನ್ನು ಕೋರ್ಟಿಗೆ ಹಾಜರಾಗಲು ನೋಟಿಸ್ ಜಾರಿ ಮಾಡಿತ್ತು. ಆದರೆ ಸಾಗರದ ಟೌನ್ ಪೋಲೀಸರು ಸಾಹಿತಿ ಭಗವಾನ್ ಅವರಿಗೆ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ನ್ಯಾಯಾಧೀಶರು ಮೈಸೂರಿನ ಎಸ್ ಪಿ ಗೆ 2-11-2022 ರಂದು ಭಗವಾನ್ ಅವರನ್ನು ಕೋಟಿಗೆ ಹಾಜರುಪಡಿಸುವಂತೆ ನೋಟಿಸ್ ಜಾರಿ ಮಾಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…