ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ 700 ಶ್ಲೋಕಗಳನ್ನು ಸುಲಲಿತವಾಗಿ ಪಠಣ ಮಾಡಿ ಶ್ರೀಗಳಿಂದ ಆಶೀರ್ವಾದ ಪೂರಕವಾಗಿ ತಲಾ 21.000 ರೂ. ನಗದು ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಯಶಸ್ಸಿಗೆ ಶ್ರಮಿಸಿದ ಸಂಸ್ಕೃತ ವಿಭಾಗದ ಶಿಕ್ಷಕರಾದ ಶೈಲಜಾ, ಎ.ಬಿ.ರಾಘವೇಂದ್ರ ಮತ್ತು ವಿಜಯಕುಮಾರ್ ಅವರನ್ನು ಮಹರ್ಷಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥ ಡಾ.ಭವಾನಿ ಶಂಕರ್, ಸಂಯೋಜಕ ತೇಜಸ್ ಬಿ.ಶಂಕರ್, ಸಂಸ್ಥೆಯ ಪ್ರಾಚಾರ್ಯ ಗೋಪಾಲ ಸ್ವಾಮಿ, ಎ.ಕುಮಾರ್ ಮತ್ತು ಸತೀಶ್ ಅಭಿನಂದಿಸಿದ್ದಾರೆ.
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…