ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ 700 ಶ್ಲೋಕಗಳನ್ನು ಸುಲಲಿತವಾಗಿ ಪಠಣ ಮಾಡಿ ಶ್ರೀಗಳಿಂದ ಆಶೀರ್ವಾದ ಪೂರಕವಾಗಿ ತಲಾ 21.000 ರೂ. ನಗದು ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಯಶಸ್ಸಿಗೆ ಶ್ರಮಿಸಿದ ಸಂಸ್ಕೃತ ವಿಭಾಗದ ಶಿಕ್ಷಕರಾದ ಶೈಲಜಾ, ಎ.ಬಿ.ರಾಘವೇಂದ್ರ ಮತ್ತು ವಿಜಯಕುಮಾರ್ ಅವರನ್ನು ಮಹರ್ಷಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥ ಡಾ.ಭವಾನಿ ಶಂಕರ್, ಸಂಯೋಜಕ ತೇಜಸ್ ಬಿ.ಶಂಕರ್, ಸಂಸ್ಥೆಯ ಪ್ರಾಚಾರ್ಯ ಗೋಪಾಲ ಸ್ವಾಮಿ, ಎ.ಕುಮಾರ್ ಮತ್ತು ಸತೀಶ್ ಅಭಿನಂದಿಸಿದ್ದಾರೆ.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…