ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ 700 ಶ್ಲೋಕಗಳನ್ನು ಸುಲಲಿತವಾಗಿ ಪಠಣ ಮಾಡಿ ಶ್ರೀಗಳಿಂದ ಆಶೀರ್ವಾದ ಪೂರಕವಾಗಿ ತಲಾ 21.000 ರೂ. ನಗದು ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಯಶಸ್ಸಿಗೆ ಶ್ರಮಿಸಿದ ಸಂಸ್ಕೃತ ವಿಭಾಗದ ಶಿಕ್ಷಕರಾದ ಶೈಲಜಾ, ಎ.ಬಿ.ರಾಘವೇಂದ್ರ ಮತ್ತು ವಿಜಯಕುಮಾರ್ ಅವರನ್ನು ಮಹರ್ಷಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥ ಡಾ.ಭವಾನಿ ಶಂಕರ್, ಸಂಯೋಜಕ ತೇಜಸ್ ಬಿ.ಶಂಕರ್, ಸಂಸ್ಥೆಯ ಪ್ರಾಚಾರ್ಯ ಗೋಪಾಲ ಸ್ವಾಮಿ, ಎ.ಕುಮಾರ್ ಮತ್ತು ಸತೀಶ್ ಅಭಿನಂದಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…